ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ

Updated on: Jul 09, 2025 | 11:17 AM

ತರುಣ್ ಸುಧೀರ್ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಏಳುಮಲೆ’ ಎಂಬ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಟೈಟಲ್ ಟೀಸರ್ ಲಾಂಚ್​ಗೆ ಶಿವಣ್ಣ ಆಗಮಿಸಿ ಶುಭ ಹಾರೈಸಿದರು. ಈ ವೇಳೆ ಅವರು ಒಂದು ವಿಚಾರವನ್ನು ರಿವೀಲ್ ಮಾಡಿದರು .

ತರುಣ್ ಸುಧೀರ್ ಅವರು ‘ಏಳುಮಲೆ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ರಾಣ ಈ ಇತ್ರಕ್ಕೆ ಹೀರೋ ಆದರೆ, ಪ್ರಿಯಾಂಕಾ ಆಚಾರ್ ನಾಯಕಿ. ಜಗಪತಿ ಬಾಬು ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟೈಟಲ್ ಟೀಸರ್ ಲಾಂಚ್​​ಗೆ ಶಿವಣ್ಣ ಆಗಮಿಸಿದ್ದರು. ಈ ವೇಳೆ ಅವರು ಹಳೆಯ ನೆನಪಿನ ಬುತ್ತಿ ತೆರೆದಿಟ್ಟರು. ‘ನನಗೆ ತರುಣ್ (Tharun Sudhir) ತಂದೆ ಸುಧೀರ್ ಮೊದಲಿನಿಂದಲೂ ಗೊತ್ತು. ನಾನು ಅವರ ಮನೆಯಲ್ಲಿ ಸಾಕಷ್ಟು ಬಾರಿ ಊಟ ಮಾಡಿದ್ದೇನೆ. ಕೋಳಿ ಸಾರು ತಿಂದಿದ್ದೇನೆ. ತರುಣ್ ಜೊತೆ ಜೊತೆ ಒಂದು ಸಿನಿಮಾ ಮಾಡಬೇಕು. ಮುಂದಿನ ದಿನಗಳಲ್ಲಿ ಮಾಡ್ತೀನಿ’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More