ಮದುವೆಗೆ ದುನಿಯಾ ವಿಜಯ್ ಬರದಿದ್ದರೆ ತಾಳಿ ಕಟ್ಟಿಸಿಕೊಳ್ಳಲ್ಲ ಎಂದು ಹಠ ಹಿಡಿದ ಯುವತಿ
ನವೆಂಬರ್ 29ಕ್ಕೆ ದಾವಣಗೆರೆಯಲ್ಲಿ ಅನುಷಾ ಮದುವೆ ಕಾರ್ಯಕ್ರಮ ನಡೆಯಲಿದೆ. ಸದ್ಯ, ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಅನುಷಾ ಅಭಿಮಾನ ಕಂಡು ಅನೇಕರು ಅಚ್ಚರಿ ಹೊರ ಹಾಕಿದ್ದಾರೆ.
ನಟ ದುನಿಯಾ ವಿಜಯ್ ಅವರು ಮದುವೆಗೆ ಬಂದು ಆಶೀರ್ವಾದ ಮಾಡದಿದ್ದರೆ ತಾಳಿಯೇ ಕಟ್ಟಿಸಿಕೊಳ್ಳುವುದಿಲ್ಲ ಎಂದು ಅಭಿಮಾನಿ ಪಟ್ಟು ಹಿಡಿದಿರುವ ಘಟನೆ ನಡೆದಿದೆ. ದಾವಣಗೆರೆಯ ರಾಮನಗರದ ಯುವತಿ ಅನುಷಾ ಹಾಗೂ ಅವರ ತಂದೆ ದುನಿಯಾ ವಿಜಯ್ ಅವರ ದೊಡ್ಡ ಅಭಿಮಾನಿ. ಮನೆ ಕಟ್ಟಿಸಿದಾಗ ದುನಿಯಾ ವಿಜಯ್ ಅವರಿಂದಲೇ ಅನುಷಾ ತಂದೆ ಶಿವಾನಂದ ಮನೆ ಗೃಹಪ್ರವೇಶ ಮಾಡಿಸಿದ್ದರು. ಮನೆಗೆ ‘ದುನಿಯಾ ಋಣ’ ಎಂದು ಹೆಸರಿಡಲಾಗಿದೆ. ಈಗ ಮದುವೆಗೆ ವಿಜಯ್ ಆಗಮಿಸಬೇಕು ಎಂದು ಅನುಷಾ ಕುಟುಂಬದವರು ಪಟ್ಟು ಹಿಡಿದಿದ್ದಾರೆ. ದುನಿಯಾ ವಿಜಯ್ ಕಂಡರೆ ಅನುಷಾಗೆ ಬಹಳ ಅಭಿಮಾನ. ಈ ಕಾರಣಕ್ಕೆ ಅವರು ಒಂಟಿ ಸಲಗ ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. ಇದೇ 29ಕ್ಕೆ ದಾವಣಗೆರೆಯಲ್ಲಿ ಅನುಷಾ ಮದುವೆ ಕಾರ್ಯಕ್ರಮ ನಡೆಯಲಿದೆ. ಸದ್ಯ, ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಅನುಷಾ ಅಭಿಮಾನ ಕಂಡು ಅನೇಕರು ಅಚ್ಚರಿ ಹೊರ ಹಾಕಿದ್ದಾರೆ.
ಇದನ್ನೂ ಓದಿ: ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್ಕುಮಾರ್
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

