‘ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇನೆ’; ಅನುಶ್ರೀಗೆ ನೇರವಾಗಿ ಹೇಳಿದ ಮನೋಜ್ ಭಾರ್ಗವ್

Updated on: May 27, 2025 | 10:48 AM

ಆ್ಯಂಕರ್ ಅನುಶ್ರೀ ಅವರು ಜೀ ಕನ್ನಡದಲ್ಲಿ ಹಲವು ರಿಯಾಲಿಟಿ ಶೋಗಳನ್ನು ನಡೆಸಿಕೊಡುತ್ತಾರೆ. ಅವರು ‘ಸರಿಗಮಪ ಸೀಸನ್ 21’ರ ಆ್ಯಂಕರಿಂಗ್ ಮಾಡುತ್ತಿದ್ದಾರೆ. ಈಗ ಮನೋಜ್ ಭಾರ್ಗವ ಅವರು ಸರಿಗಮಪ ವೇದಿಕೆ ಮೇಲೆ ಅನುಶ್ರೀಗೆ ಒಂದು ಮಾತು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಆ್ಯಂಕರ್ ಅನುಶ್ರೀ (Anchor Anushree) ಅವರು ‘ಸರಿಗಮಪ’ ವೇದಿಕೆ ಮೇಲೆ ಮಿಂಚುತ್ತಿದ್ದಾರೆ. ಪ್ರತಿ ಬಾರಿಯೂ ಅವರ ಆ್ಯಂಕರಿಂಗ್ ಗಮನ ಸೆಳೆಯುತ್ತದೆ. ಇತ್ತೀಚೆಗೆ ‘ಸರಿಗಮಪ ಸೀಶನ್ 21’ರ ಸೆಮಿಫೈನಲ್ ನಡೆಯಿತು. ವೇದಿಕೆಯಿಂದ ಸ್ಪರ್ಧಿ ಮನೋಜ್ ಭಾರ್ಗವ್ ಹೊರ ಹೋದರು. ಈ ವೇಳೆ ಅವರು ಅನುಶ್ರೀ ಬಳಿ ‘ನಾನು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದರು. ಮನೋಜ್ ಭಾರ್ಗವ್​​ಗೆ ಇಷ್ಟು ದಿನ ಅನುಶ್ರೀ ಜೊತೆ ಒಳ್ಳೆಯ ಒಡನಾಟ ಇತ್ತು. ತಾಯಿ ಸ್ಥಾನದಲ್ಲಿ ನಿಂತು ಅನುಶ್ರೀ ಅವರು ಮನೋಜ್ ಭಾರ್ಗವ್​ಗೆ ಮಾರ್ಗದರ್ಶನ ನೀಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More