AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವಸ್ಥಾನದ ಮುಂದೆ ಆ ವಿಚಾರ ಬೇಡ’; ದರ್ಶನ್ ವಿಚಾರದಲ್ಲಿ ಶ್ರುತಿ ಖಡಕ್ ಮಾತು 

‘ದೇವಸ್ಥಾನದ ಮುಂದೆ ಆ ವಿಚಾರ ಬೇಡ’; ದರ್ಶನ್ ವಿಚಾರದಲ್ಲಿ ಶ್ರುತಿ ಖಡಕ್ ಮಾತು 

ರಾಜೇಶ್ ದುಗ್ಗುಮನೆ
|

Updated on: Aug 26, 2024 | 1:03 PM

Share

ನಟ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡೋಕೆ ನಟಿ ಶ್ರುತಿ ನಿರಾಕರಿಸಿದ್ದಾರೆ.

ನಟ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿ ಸೆನ್ಸೇಷನ್ ಸೃಷ್ಟಿ ಮಾಡಿದೆ. ಜೈಲಿನಲ್ಲಿ ಅವರು ರೌಡಿ ಶೀಟರ್ ನಾಗನ ಜೊತೆ ಕುಳಿತು ಸಿಗರೇಟ್ ಸೇದುತ್ತಿರುವ ಫೋಟೋ ಇದಾಗಿದೆ. ಈ ಫೋಟೋದಿಂದ ರಾಜ್ಯ ಸರ್ಕಾರ ಮುಜುಗರ ಅನುಭವಿಸುವಂತೆ ಆಗಿದೆ. ಜೈಲಿನಲ್ಲಿ ದರ್ಶನ್ ರಾಜಮರ್ಯಾದೆ ಪಡೆಯುತ್ತಿರುವುದು ಸ್ಪಷ್ಟವಾಗಿದೆ. ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಲು ನಟಿ ಶ್ರುತಿ ನಿರಾಕರಿಸಿದ್ದಾರೆ. ಅವರು ಕೃಷ್ಣಾಷ್ಟಮಿ ಆಚರಿಸಲು ಇಸ್ಕಾನ್​ಗೆ ಆಗಮಿಸಿದ್ದರು. ಈ ವೇಳೆ ದರ್ಶನ್​​ ಬಗ್ಗೆ ಕೇಳಲಾಗಿದೆ. ‘ದೇವಸ್ಥಾನದ ಮುಂದೆ ಇದೀನಿ. ನಾನು ಕನ್ನಡದವಳು. ಎಲ್ಲಾ ಸ್ಟುಡಿಯೋದಲ್ಲಿ ಸಿಕ್ತೀನಿ. ದೇವಸ್ಥಾನದ ಮುಂದೆ ಬೇರೆ ವಿಚಾರ ಬೇಡ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More