‘ದೇವಸ್ಥಾನದ ಮುಂದೆ ಆ ವಿಚಾರ ಬೇಡ’; ದರ್ಶನ್ ವಿಚಾರದಲ್ಲಿ ಶ್ರುತಿ ಖಡಕ್ ಮಾತು
ನಟ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡೋಕೆ ನಟಿ ಶ್ರುತಿ ನಿರಾಕರಿಸಿದ್ದಾರೆ.
ನಟ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿ ಸೆನ್ಸೇಷನ್ ಸೃಷ್ಟಿ ಮಾಡಿದೆ. ಜೈಲಿನಲ್ಲಿ ಅವರು ರೌಡಿ ಶೀಟರ್ ನಾಗನ ಜೊತೆ ಕುಳಿತು ಸಿಗರೇಟ್ ಸೇದುತ್ತಿರುವ ಫೋಟೋ ಇದಾಗಿದೆ. ಈ ಫೋಟೋದಿಂದ ರಾಜ್ಯ ಸರ್ಕಾರ ಮುಜುಗರ ಅನುಭವಿಸುವಂತೆ ಆಗಿದೆ. ಜೈಲಿನಲ್ಲಿ ದರ್ಶನ್ ರಾಜಮರ್ಯಾದೆ ಪಡೆಯುತ್ತಿರುವುದು ಸ್ಪಷ್ಟವಾಗಿದೆ. ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಲು ನಟಿ ಶ್ರುತಿ ನಿರಾಕರಿಸಿದ್ದಾರೆ. ಅವರು ಕೃಷ್ಣಾಷ್ಟಮಿ ಆಚರಿಸಲು ಇಸ್ಕಾನ್ಗೆ ಆಗಮಿಸಿದ್ದರು. ಈ ವೇಳೆ ದರ್ಶನ್ ಬಗ್ಗೆ ಕೇಳಲಾಗಿದೆ. ‘ದೇವಸ್ಥಾನದ ಮುಂದೆ ಇದೀನಿ. ನಾನು ಕನ್ನಡದವಳು. ಎಲ್ಲಾ ಸ್ಟುಡಿಯೋದಲ್ಲಿ ಸಿಕ್ತೀನಿ. ದೇವಸ್ಥಾನದ ಮುಂದೆ ಬೇರೆ ವಿಚಾರ ಬೇಡ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
