AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ನ್ಯಾಯ ಸಿಗುವವರೆಗೂ ಧರಣಿ ನಡೆಯುತ್ತೆ’; ಎಚ್ಚರಿಕೆ ನೀಡಿದ ನಿರ್ಮಾಪಕ ಕುಮಾರ್

‘ನನಗೆ ನ್ಯಾಯ ಸಿಗುವವರೆಗೂ ನಾನು ಪ್ರತಿಭಟನೆ ಮುಂದುವರಿಸುತ್ತೇನೆ’ ಎಂದು ಎಂಎನ್​ ಕುಮಾರ್ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jul 17, 2023 | 2:15 PM

Share

ನಿರ್ಮಾಪಕ ಕುಮಾರ್ ಅವರು ಕಿಚ್ಚ ಸುದೀಪ್ (Sudeep) ವಿರುದ್ಧ ಸಿಡಿದೆದ್ದಿದ್ದಾರೆ. ಸುದೀಪ್ ಕೋರ್ಟ್ ಮೆಟ್ಟಿಲು ಹತ್ತಿದ್ದನ್ನು ಖಂಡಿಸಿದ್ದಾರೆ. ಫಿಲ್ಮ್​ ಚೇಂಬರ್​ನಲ್ಲೇ ಎಲ್ಲವೂ ಇತ್ಯರ್ಥ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಫಿಲ್ಮ್​ ಚೇಂಬರ್ ಎದುರು ಅವರು ಪ್ರತಿಭಟನೆ ಆರಂಭಿಸಿದ್ದಾರೆ. ಈ ಪ್ರತಿಭಟನೆ ಎಷ್ಟು ದಿನ ನಡೆಯಲಿದೆ ಎಂಬುದನ್ನು ಅವರು ಹೇಳಿದ್ದಾರೆ. ‘ನನಗೆ ನ್ಯಾಯ ಸಿಗುವವರೆಗೂ ನಾನು ಪ್ರತಿಭಟನೆ ಮುಂದುವರಿಸುತ್ತೇನೆ’ ಎಂದು ಎಂಎನ್​ ಕುಮಾರ್ (MN Kumar) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:14 pm, Mon, 17 July 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More