ಹಾಲು ಉತ್ಪಾದಕರಿಗೆ ನೀಡುವ ಸಬ್ಸಿಡಿಯನ್ನು ₹ 5 ಹೆಚ್ಚಿಸುವಂತೆ ಸಿಎಂಗೆ ಮನವಿ ಮಾಡಲಾಗುವುದು: ಯೋಗೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 29, 2024 | 3:37 PM

ಹಾಲು ಉತ್ಪಾದನೆಗೆ ಚನ್ನಪಟ್ಟಣ ರಾಜ್ಯದಲ್ಲೇ ಅತಿದೊಡ್ಡ ಕೇಂದ್ರವಾಗಿದೆ, ಹಾಲು ಉತ್ಪಾದಕರಿಗೆ ಸರ್ಕಾರ ನೆರವಾಗಬೇಕಿದೆ, ಅವರಿಗೆ ನೀಡುವ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್​ಗೆ ₹ 5 ಹೆಚ್ಚಿಸುವಂತೆ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಯವರ ಜೊತೆ ಹೈನುಗಾರಿಕೆ ಸಚಿವ ಮತ್ತು ಸಹಕಾರ ಸಚಿವರ ಗಮನ ಸೆಳೆಯಲಾಗುವುದು ಎಂದು ಯೋಗೇಶ್ವರ್ ಹೇಳಿದರು.

ರಾಮನಗರ: ಕಾಂಗ್ರೆಸ್ ಸೇರುವಾಗ ಪಕ್ಷದ ನಾಯಕರ ಮುಂದೆ ಯಾವ ಬೇಡಿಕೆಯನ್ನೂ ಇಟ್ಟಿರಲಿಲ್ಲ, ತನ್ನ ಗಮನವೆಲ್ಲ ಉಳಿದಿರುವ ಮೂರೂವರೆ ವರ್ಷಗಳಲ್ಲಿ ಚನ್ನಪಟ್ಟಣದ ಅಭಿವೃದ್ಧಿಯ ಮೇಲೆ ನೆಟ್ಟಿದೆ, ಉಪ ಮುಖ್ಯಮಂತ್ರಿವರು ರಾಮನಗರ ಜಿಲ್ಲೆಯವರಾಗಿರುವುದು ತಮಗೆ ದೊಡ್ಡ ಬಲ, ಜಿಲ್ಲೆಯವರೇ ಆಗಿರುವ ಹೆಚ್ ಸಿ ಬಾಲಕೃಷ್ಣ ಅವರು ಕಾಂಗ್ರೆಸ್​ನಲ್ಲಿ ತನಗಿಂತ ಸೀನಿಯರ್ ಲೀಡರ್ ಅಗಿದ್ದಾರೆ, ಅವರಿಗೆ ಸಚಿವ ಸ್ಥಾನ ಸಿಕ್ಕರೂ ಸಂತೋಷ, ಒಟ್ಟಾಗಿ ರಾಮನಗರ ಜಿಲ್ಲೆಯ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ ಎಂದು ಸಿಪಿ ಯೋಗೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೊಸ ಶಾಸಕನ ಮುಂದಿವೆ ಹಲವು ಸವಾಲು, ಜನರ ನಿರೀಕ್ಷೆಗೆ ಸ್ಪಂದಿಸುವರೇ ಯೋಗೇಶ್ವರ್?

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.