ದರ್ಶನ್ ಬಗ್ಗೆ ಮಾತನಾಡಿದ ಹ್ಯಾಂಡ್ಸಮ್ ಹೀರೋ ಧ್ಯಾನ್
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರು ಕಳೆದ ಒಂದು ತಿಂಗಳಿಂದ ಜೈಲಿನಲ್ಲೇ ಇದ್ದಾರೆ. ಅವರ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್ ಬಗ್ಗೆ ಧ್ಯಾನ್ ಅವರು ಮಾತನಾಡಿದ್ದಾರೆ.
‘ಮೊನಾಲಿಸಾ’ ಸಿನಿಮಾಗೆ 20 ವರ್ಷಗಳು ಕಳೆದಿವೆ. ಈ ಸಿನಿಮಾದಲ್ಲಿ ಧ್ಯಾನ್ ನಟಿಸಿದ್ದರು. ಇದನ್ನು ತಂಡದವರು ಸಂಭ್ರಮಿಸಿಕೊಂಡಿದ್ದಾರೆ. ಧ್ಯಾನ್ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ‘ಶರಣ್, ದುನಿಯಾ ವಿಜಯ್ ಹಾಗೂ ಯಶ್ ಜೊತೆ ಕೆಲಸ ಮಾಡಿದ್ದೇನೆ. ಮಿಸ್ಟರ್ ಆ್ಯಂಡ್ ಮಿಸಸ್ ರಾಮಾಚಾರಿ ಸಿನಿಮಾದಲ್ಲಿ ನಾನು ನಟಿಸಿದ್ದೆ. ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರಿಗೆ ಆಲ್ ದಿ ಬೆಸ್ಟ್’ ಎಂದಿದ್ದಾರೆ. ಆ ಬಳಿಕ ದರ್ಶನ್ ಬಗ್ಗೆಯೂ ಧ್ಯಾನ್ ಮಾತನಾಡಿದ್ದಾರೆ. ‘ದರ್ಶನ್ಗೆ ಗುಡ್ಲಕ್’ ಎಂದಿರೋ ಅವರು ‘ಎಲ್ಲಾ ಸಮಸ್ಯೆಗಳೂ ಪರಿಹಾರ ಆಗುತ್ತವೆ ಎಂದು ನಾನು ಭಾವಿಸಿದ್ದೇನೆ’ ಎಂದಿದ್ದಾರೆ ಧ್ಯಾನ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಹೋದ ಜೀವ ವಾಪಸ್ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

