ದರ್ಶನ್ (Darshan) ಅವರು ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಲ್ಲಿ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈಗ ಭಾವನಾ ರಾಮಣ್ಣ ಅವರು ದರ್ಶನ್ ತೂಗುದೀಪ ಪರ ಮಾತನಾಡಿದ್ದಾರೆ. ‘ಯಾವುದೇ ಹೆಣ್ಣಾದರೂ ಅವರಿಗೆ ಮನೆ ಇರುತ್ತದೆ, ಮನಸ್ಸು ಇರುತ್ತದೆ. 19 ವರ್ಷದ ಹುಡುಗಿಗೆ ಈ ರೀತಿ ಮೆಸೇಜ್ ಬಂದಿದ್ದರೆ ಅವಳು ಆತ್ಮಹತ್ಯೆ ಮಾಡಿಕೊಳ್ಳಬಹುದು. ಘೋರ ಕೃತ್ಯ ನಡೆದ ಬಳಿಕ ಅದರ ಬಗ್ಗೆ ಚರ್ಚೆ ನಡೆಸಬಹುದು ಅಷ್ಟೇ, ಆದರೆ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಭಾರತೀಯರು ಎಮೋಷನಲ್ ಪರ್ಸನಲ್. ದರ್ಶನ್ ಜೊತೆ ಹಲವು ಸಿನಿಮಾ ಮಾಡಿದ್ದೇನೆ. ಫ್ರೆಂಡ್ಲಿ ಆಗಿ ನಾವು ಸಾಕಷ್ಟು ಬಾರಿ ಸೇರಿದ್ದೇವೆ. ನಾನು ದರ್ಶನ್ ಪರವಾಗಿ ನಿಲ್ಲುತ್ತೇನೆ. ಸಂತೋಷವಾಗಿ ಭಾಗಿ ಆಗಿ ದುಃಖದಲ್ಲಿ ಭಾಗಿ ಆಗಿಲ್ಲ ಎಂದರೆ ತಪ್ಪಾಗುತ್ತದೆ’ ಎಂದಿದ್ದಾರೆ ಭಾವನಾ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 8:55 am, Thu, 27 June 24