AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜೊತೆ ಮೈತ್ರಿ ವಿಷಯ ಮಾತಾಡಲಾರೆ, ಕುಮಾರಸ್ವಾಮಿ ಪ್ರತಿಕ್ರಿಯೆ ನೀಡುತ್ತಾರೆ: ಹೆಚ್ ಡಿ ದೇವೇಗೌಡ

ಬಿಜೆಪಿ ಜೊತೆ ಮೈತ್ರಿ ವಿಷಯ ಮಾತಾಡಲಾರೆ, ಕುಮಾರಸ್ವಾಮಿ ಪ್ರತಿಕ್ರಿಯೆ ನೀಡುತ್ತಾರೆ: ಹೆಚ್ ಡಿ ದೇವೇಗೌಡ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 22, 2023 | 2:16 PM

Share

ನಿನ್ನೆ ದೆಹಲಿಗೆ ಹೊರಡುವ ಮೊದಲು ಕುಮಾರಸ್ವಾಮಿ, ಮೈತ್ರಿ ವಿಷಯದಲ್ಲಿ ಅಗತ್ಯ ಬಿದ್ದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ದೇವೇಗೌಡರ ನಡುವೆ ಮಾತುಕತೆ ನಡೆಯಲಿದೆ ಅಂತ ಹೇಳಿದ್ದರು. ಆದರೆ ದೊಡ್ಡಗೌಡರು ಅದಕ್ಕೂ ತನಗೂ ಸಂಬಂಧವೇ ಇಲ್ಲ ಅನ್ನೋ ಹಾಗೆ ಮಾತಾಡಿದರು.

ದೆಹಲಿ: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಇನ್ನೂ ಒಗಟಾಗಿಯೇ ಉಳಿದಿದೆ. ದೆಹಲಿಯಲ್ಲಿ ಇಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಜೆಡಿಎಸ್ ಪಿತಾಮಹ ಹೆಚ್ ಡಿ ದೇವೇಗೌಡ​  (HD Devegowda) ಮೈತ್ರಿ ಅಥವಾ ಹೊಂದಾಣಿಕೆ ವಿಷಯದಲ್ಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಬಿಜೆಪಿ ಜೊತೆ ಮೈತ್ರಿ ಬೆಳಸುವುದು ಹೆಚ್ ಡಿ ಕುಮಾರಸ್ವಾಮಿ (HD Kumarswamy) ಅವರಿಗೆ ಬಿಟ್ಟ ವಿಚಾರ, ಯಾಕೆಂದರೆ ರಾಜ್ಯದಲ್ಲಿ ಹೋರಾಟ ನಡೆಸುವವರು ಅವರು, ಹಾಗಾಗಿ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಮತ್ತು ಪ್ರತಿಕ್ರಿಯೆಯನ್ನೂ ನೀಡುತ್ತಾರೆ ಎಂದು ದೇವೇಗೌಡ ಹೇಳಿದರು. ಗುರುವಾರದಂದು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Pramod Sawant) ಅವರನ್ನು ಭೇಟಿಯಾದ ಹಿನ್ನೆಲೆ ಕುರಿತು ಕೇಳಿದಾಗ ಅವರು ತಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ ಅಂದರು. ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆದ ಬಳಿಕ ಮತ್ತು ಇದಕ್ಕೂ ಮುಂಚೆ ಮಾಧ್ಯಮದವರು ಕೇಳಿದಾಗಲೂ ತಾವು ಅದನ್ನೇ ಹೇಳಿದ್ದು ಎಂದು ದೇವೇಗೌಡ ಹೇಳಿದರು. ನಿನ್ನೆ ದೆಹಲಿಗೆ ಹೊರಡುವ ಮೊದಲು ಕುಮಾರಸ್ವಾಮಿ, ಮೈತ್ರಿ ವಿಷಯದಲ್ಲಿ ಅಗತ್ಯ ಬಿದ್ದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ದೇವೇಗೌಡರ ನಡುವೆ ಮಾತುಕತೆ ನಡೆಯಲಿದೆ ಅಂತ ಹೇಳಿದ್ದರು. ಆದರೆ ದೊಡ್ಡಗೌಡರು ಅದಕ್ಕೂ ತನಗೂ ಸಂಬಂಧವೇ ಇಲ್ಲ ಅನ್ನೋ ಹಾಗೆ ಮಾತಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.