Kalaburagi; ಬೇರೆಯವರಂತೆ ಕೈಕಾಲು ಹಿಡಿದಿದ್ದರೆ ಯಾವತ್ತೋ ಮುಖ್ಯಮಂತ್ರಿಯಾಗಿರುತ್ತಿದ್ದೆ: ಬಸನಗೌಡ ಪಾಟೀಲ್ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 28, 2023 | 10:14 AM

ಅಮೇಲೆ ಅವರು ನನಗೆ ಮಂತ್ರಿ, ಮುಖ್ಯಮಂತ್ರಿಯಾಗುವ ಆಸೆಯಿಲ್ಲ, ಬೇರೆಯವರ ಏಳ್ಗೆಯನ್ನು ನೋಡಿ ಸಂತೋಷ ಪಡುತ್ತೇನೆ ಅನ್ನುತ್ತಾರೆ.

ಕಲಬುರಗಿ: ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರು ನೇರವಂತಿಕೆಯ ಮಾತಾಡುತ್ತಾರೋ ಅಥವಾ ಹಾಗೆ ತೋರಿಸಿಕೊಳ್ಳುತ್ತಾರೋ ಗೊತ್ತಾಗದು. ಯಾಕೆ ಗೊತ್ತಾ? ಒಮ್ಮೆ ಬೆಂಗಳೂರಲ್ಲಿ ಮಾತಾಡುವಾಗ ನನಗೆ ಮಂತ್ರಿ ಪದವಿಯಿಂದ (ministerial berth) ವಂಚಿಸಲಾಯಿತು ಅನ್ನುತ್ತಾರೆ. ಇವತ್ತು ಕಲಬುರಗಿಯಲ್ಲಿ (Kalaburagi) ಮಾತಾಡುವಾಗ ಬೇರೆಯವರ ಹಾಗೆ ನಾನೂ ಕೈಕಾಲು ಹಿಡಿದಿದ್ದರೆ ಯಾವತ್ತೋ ಮುಖ್ಯಮಂತ್ರಿಯಾಗುತ್ತಿದ್ದೆ ಅನ್ನುತ್ತಾರೆ. ಅಮೇಲೆ ಅವರು ನನಗೆ ಮಂತ್ರಿ, ಮುಖ್ಯಮಂತ್ರಿಯಾಗುವ ಆಸೆಯಿಲ್ಲ, ಬೇರೆಯವರ ಏಳ್ಗೆಯನ್ನು ನೋಡಿ ಸಂತೋಷ ಪಡುತ್ತೇನೆ ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.