ನೋಟೀಸ್ಗೆ ಕೊಡುವ ಉತ್ತರದಲ್ಲೂ ನನ್ನ ಹೇಳಿಕೆಗೆ ಬದ್ಧ ಅಂತ ಹೇಳುತ್ತೇನೆ: ಇಕ್ಬಾಲ್ ಹುಸೇನ್, ಶಾಸಕ
ಕಾಂಗ್ರೆಸ್ ಪಕ್ಷ ರಾಜ್ಯಮಟ್ಟದ ಕಾರ್ಯದರ್ಶಿಗಳು ಶುಕ್ರವಾರದಂದಯ ರಾಮನಗರಕ್ಕೆ ಬರಲಿದ್ದಾರೆ, ಅವರ ಜೊತೆ ಉನ್ನತಮಟ್ಟದ ಅಧಿಕಾರಿಗಳು ಸಹ ಇಲ್ಲಿಗೆ ಬಂದು ಸಭೆ ನಡೆಸಲಿದ್ದಾರೆ, ಪ್ರತಿಸಲ ವಿಧಾನಸೌಧದಲ್ಲಿ ಮೀಟಿಂಗ್ ಮಾಡೋದ್ರಿಂದ ಪ್ರಯೋಜನವಿಲ್ಲ ಅಂತ ತಾನು ಮನವಿ ಮಾಡಿಕೊಂಡ ಕಾರಣ ಇತಿಹಾಸದಲ್ಲೇ ಮೊದಲ ಬಾರಿಗೆ ಅಧಿಕಾರಿಗಳ ತಂಡ ರಾಮನಗರಕ್ಕೆ ಬರುತ್ತಿದೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.
ಬೆಂಗಳೂರು ದಕ್ಷಿಣ, ಜುಲೈ 8: ನಗರಲ್ಲಿಂದು ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಸ್ಥಳೀಯ ಶಾಸಕ ಇಕ್ಬಾಲ್ ಹುಸೇನ್ ಅವರು ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ತನ್ನ ಹೇಳಿಕೆ ಈಗಲೂ ಬದ್ಧ ಎಂದು ಮತ್ತೊಮ್ಮೆ ಹೇಳಿದರು. ಇವತ್ತು ಕೆಪಿಸಿಸಿ ಅಧ್ಯಕ್ಷರು (KPCC president) ಕೊಟ್ಟಿರುವ ನೋಟೀಸ್ಗೆ ಉತ್ತರ ಕೊಡಬೇಕಿದೆ, ನಮ್ಮ ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ಕಾರ್ಯದರ್ಶಿಗಳಿ ನನ್ನ ಉತ್ತರಕ್ಕಾಗಿ ತಲೆಮೇಲೆ ಕೂತಿದ್ದಾರೆ, ಇವತ್ತು ಕೊನೇದಿನ ಎಂದು ಇಕ್ಬಾಲ್ ಹುಸೇನ್ ಹೇಳಿದರು. ಏನಂತ ಉತ್ತರ ಕೋಡ್ತೀರಾ ಅಂತ ಕೇಳಿದರೆ. ಶಿವಕುಮಾರ್ಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬೇಕು ಎಂಬ ನನ್ನ ಹೇಳಿಕೆಗೆ ಯಾವತ್ತೂ ಬದ್ಧ, ಅದನ್ನು ಸಾರ್ವಜನಿಕವಾಗಿ ಚರ್ಚಿಬಾರದು ಅಂತ ಹೇಳಿದ್ದಾರೆ, ಆದರೆ ನೋಟೀಸ್ಗೆ ಕೊಡುವ ಉತ್ತರದಲ್ಲಿ ಮಾತ್ರ ಹೇಳಿಕೆಗೆ ಬದ್ಧ ಅಂತ ಹೇಳುತ್ತೇನೆ ಎಂದು ಇಕ್ಬಾಲ್ ಹುಸೇನ್ ಹೇಳಿದರು
ಇದನ್ನೂ ಓದಿ: ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್ ಭವಿಷ್ಯ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಮಹಿಳೆಯ ಹೆಲ್ಮೆಟ್ ಛಿದ್ರ!

ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್

ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
