ಯಾರೇ ಲಂಚ ಕೇಳಿದರೂ ಕೊಡೋದಿಲ್ಲ ಹೇಳಿ; ಕರೂರಿನಲ್ಲಿ ಭ್ರಷ್ಟಾಚಾರದ ವಿರುದ್ಧ ಗುಡುಗಿದ ಸಿಎಂ ವಿಜಯ್
ಇದೇವೇಳೆ, ತಮ್ಮ 55 ದಿನಗಳ ಆಡಳಿತದಲ್ಲಿ ಮಾಡಿದ ಬದಲಾವಣೆಗಳನ್ನು ಪಟ್ಟಿ ಮಾಡಿದ ಸಿಎಂ ವಿಜಯ್, "ಲಂಚ ಮತ್ತು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ, ಅದು ನಮ್ಮ ರಕ್ತದಲ್ಲಿ ಬೇರೂರಿದೆ ಎಂದು ಹೇಳುವವರ ಬಾಯಿ ಮುಚ್ಚಿಸಲು ಇಂದು ಸರ್ಕಾರಿ ಕಚೇರಿಗಳಲ್ಲಿ ಒಂದು ಪೈಸೆ ಲಂಚ ಅಥವಾ ಭ್ರಷ್ಟಾಚಾರವಿಲ್ಲದೆ ಕೆಲಸಗಳು ಟಕಟಕನೆ ನಡೆಯುತ್ತಿವೆ" ಎಂದು ಹೇಳಿದರು. ಪ್ರಸ್ತುತ ಆಡಳಿತದಲ್ಲಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರನ್ನು ಸರಿಯಾದ ಗೌರವ ಮತ್ತು ಸೂಕ್ತ ಆಸನಗಳೊಂದಿಗೆ ನಡೆಸಿಕೊಂಡಿದ್ದಕ್ಕಾಗಿ ಅಧಿಕಾರಿಗಳನ್ನು ವೃದ್ಧರೊಬ್ಬರು ಹೊಗಳಿದ್ದನ್ನು ಅವರು ಹಂಚಿಕೊಂಡರು.
ಕರೂರ್, ಜುಲೈ 10: ಇಂದು ತಮಿಳುನಾಡಿನ ಕರೂರ್ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ವಿಜಯ್ (CM Vijay), “ನಿಮ್ಮ ಬಳಿ ಯಾರೇ ಲಂಚ ಕೇಳಿದರೂ ನೀವು ಅದನ್ನು ಕಟ್ಟುನಿಟ್ಟಾಗಿ ನಿರಾಕರಿಸಬೇಕು” ಎಂದು ಘೋಷಿಸಿದ್ದಾರೆ. ನಿಮ್ಮ ಜೊತೆಗೆ ನಾನಿದ್ದೇನೆ. ಲಂಚ ಕೊಡುವಂತಿಲ್ಲ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ ಎಂದು ಹೇಳಿ. ಹಾಗೆ ನಿರಾಕರಿಸುವ ಜನರ ಪರವಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಸಂಪೂರ್ಣ ಬೆಂಬಲವಾಗಿ ನಿಲ್ಲಲಿದ್ದೇನೆ ಎಂಬ ಭರವಸೆಯನ್ನೂ ನೀಡಿದ್ದಾರೆ.
ಇದೇವೇಳೆ, ತಮ್ಮ 55 ದಿನಗಳ ಆಡಳಿತದಲ್ಲಿ ಮಾಡಿದ ಬದಲಾವಣೆಗಳನ್ನು ಪಟ್ಟಿ ಮಾಡಿದ ಸಿಎಂ ವಿಜಯ್, “ಲಂಚ ಮತ್ತು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ, ಅದು ನಮ್ಮ ರಕ್ತದಲ್ಲಿ ಬೇರೂರಿದೆ ಎಂದು ಹೇಳುವವರ ಬಾಯಿ ಮುಚ್ಚಿಸಲು ಇಂದು ಸರ್ಕಾರಿ ಕಚೇರಿಗಳಲ್ಲಿ ಒಂದು ಪೈಸೆ ಲಂಚ ಅಥವಾ ಭ್ರಷ್ಟಾಚಾರವಿಲ್ಲದೆ ಕೆಲಸಗಳು ಟಕಟಕನೆ ನಡೆಯುತ್ತಿವೆ” ಎಂದು ಹೇಳಿದರು. ಪ್ರಸ್ತುತ ಆಡಳಿತದಲ್ಲಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರನ್ನು ಸರಿಯಾದ ಗೌರವ ಮತ್ತು ಸೂಕ್ತ ಆಸನಗಳೊಂದಿಗೆ ನಡೆಸಿಕೊಂಡಿದ್ದಕ್ಕಾಗಿ ಅಧಿಕಾರಿಗಳನ್ನು ವೃದ್ಧರೊಬ್ಬರು ಹೊಗಳಿದ್ದನ್ನು ಅವರು ಹಂಚಿಕೊಂಡರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್ಬಾಸ್ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ಸ್ಪರ್ಧಿಗಳ ಕೆಲಸವೇನು?

