AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೇ ಲಂಚ ಕೇಳಿದರೂ ಕೊಡೋದಿಲ್ಲ ಹೇಳಿ; ಕರೂರಿನಲ್ಲಿ ಭ್ರಷ್ಟಾಚಾರದ ವಿರುದ್ಧ ಗುಡುಗಿದ ಸಿಎಂ ವಿಜಯ್

ಯಾರೇ ಲಂಚ ಕೇಳಿದರೂ ಕೊಡೋದಿಲ್ಲ ಹೇಳಿ; ಕರೂರಿನಲ್ಲಿ ಭ್ರಷ್ಟಾಚಾರದ ವಿರುದ್ಧ ಗುಡುಗಿದ ಸಿಎಂ ವಿಜಯ್

ಸುಷ್ಮಾ ಚಕ್ರೆ
|

Updated on: Jul 10, 2026 | 8:44 PM

Share

ಇದೇವೇಳೆ, ತಮ್ಮ 55 ದಿನಗಳ ಆಡಳಿತದಲ್ಲಿ ಮಾಡಿದ ಬದಲಾವಣೆಗಳನ್ನು ಪಟ್ಟಿ ಮಾಡಿದ ಸಿಎಂ ವಿಜಯ್, "ಲಂಚ ಮತ್ತು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ, ಅದು ನಮ್ಮ ರಕ್ತದಲ್ಲಿ ಬೇರೂರಿದೆ ಎಂದು ಹೇಳುವವರ ಬಾಯಿ ಮುಚ್ಚಿಸಲು ಇಂದು ಸರ್ಕಾರಿ ಕಚೇರಿಗಳಲ್ಲಿ ಒಂದು ಪೈಸೆ ಲಂಚ ಅಥವಾ ಭ್ರಷ್ಟಾಚಾರವಿಲ್ಲದೆ ಕೆಲಸಗಳು ಟಕಟಕನೆ ನಡೆಯುತ್ತಿವೆ" ಎಂದು ಹೇಳಿದರು. ಪ್ರಸ್ತುತ ಆಡಳಿತದಲ್ಲಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರನ್ನು ಸರಿಯಾದ ಗೌರವ ಮತ್ತು ಸೂಕ್ತ ಆಸನಗಳೊಂದಿಗೆ ನಡೆಸಿಕೊಂಡಿದ್ದಕ್ಕಾಗಿ ಅಧಿಕಾರಿಗಳನ್ನು ವೃದ್ಧರೊಬ್ಬರು ಹೊಗಳಿದ್ದನ್ನು ಅವರು ಹಂಚಿಕೊಂಡರು.

ಕರೂರ್, ಜುಲೈ 10: ಇಂದು ತಮಿಳುನಾಡಿನ ಕರೂರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ವಿಜಯ್ (CM Vijay), “ನಿಮ್ಮ ಬಳಿ ಯಾರೇ ಲಂಚ ಕೇಳಿದರೂ ನೀವು ಅದನ್ನು ಕಟ್ಟುನಿಟ್ಟಾಗಿ ನಿರಾಕರಿಸಬೇಕು” ಎಂದು ಘೋಷಿಸಿದ್ದಾರೆ. ನಿಮ್ಮ ಜೊತೆಗೆ ನಾನಿದ್ದೇನೆ. ಲಂಚ ಕೊಡುವಂತಿಲ್ಲ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ ಎಂದು ಹೇಳಿ. ಹಾಗೆ ನಿರಾಕರಿಸುವ ಜನರ ಪರವಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಸಂಪೂರ್ಣ ಬೆಂಬಲವಾಗಿ ನಿಲ್ಲಲಿದ್ದೇನೆ ಎಂಬ ಭರವಸೆಯನ್ನೂ ನೀಡಿದ್ದಾರೆ.

ಇದೇವೇಳೆ, ತಮ್ಮ 55 ದಿನಗಳ ಆಡಳಿತದಲ್ಲಿ ಮಾಡಿದ ಬದಲಾವಣೆಗಳನ್ನು ಪಟ್ಟಿ ಮಾಡಿದ ಸಿಎಂ ವಿಜಯ್, “ಲಂಚ ಮತ್ತು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ, ಅದು ನಮ್ಮ ರಕ್ತದಲ್ಲಿ ಬೇರೂರಿದೆ ಎಂದು ಹೇಳುವವರ ಬಾಯಿ ಮುಚ್ಚಿಸಲು ಇಂದು ಸರ್ಕಾರಿ ಕಚೇರಿಗಳಲ್ಲಿ ಒಂದು ಪೈಸೆ ಲಂಚ ಅಥವಾ ಭ್ರಷ್ಟಾಚಾರವಿಲ್ಲದೆ ಕೆಲಸಗಳು ಟಕಟಕನೆ ನಡೆಯುತ್ತಿವೆ” ಎಂದು ಹೇಳಿದರು. ಪ್ರಸ್ತುತ ಆಡಳಿತದಲ್ಲಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರನ್ನು ಸರಿಯಾದ ಗೌರವ ಮತ್ತು ಸೂಕ್ತ ಆಸನಗಳೊಂದಿಗೆ ನಡೆಸಿಕೊಂಡಿದ್ದಕ್ಕಾಗಿ ಅಧಿಕಾರಿಗಳನ್ನು ವೃದ್ಧರೊಬ್ಬರು ಹೊಗಳಿದ್ದನ್ನು ಅವರು ಹಂಚಿಕೊಂಡರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us