ಬಳ್ಳಾರಿಯ ಶಾಸಕ ಮತ್ತು ಸಚಿವರು ಕೆಆರ್​ಪಿಪಿ ಕಾರ್ಯಕರ್ತರಿಗೆ ಕಿರುಕುಳ ನೀಡುವುದು ನಿಲ್ಲಿಸದಿದ್ದರೆ ಉಗ್ರ ಹೋರಾಟ: ಗಾಲಿ ಜನಾರ್ಧನರೆಡ್ಡಿ

ಅರುಣ್​ ಕುಮಾರ್​ ಬೆಳ್ಳಿ

Updated on: Aug 25, 2023 | 7:28 PM

ಜಿಲ್ಲೆಯ ಮಂತ್ರಿಗಳು ಮತ್ತು ಶಾಸಕರು ಬಳ್ಳಾರಿಯ ಜನ ತನ್ನನ್ನು ನೆನಪಿಗೆ ತಂದುಕೊಳ್ಳದಂಥ ಕೆಲಸಗಳನ್ನು ಮಾಡಿ ಅವರ ಮೆಚ್ಚುಗೆಗೆ ಪಾತ್ರರಾಗಬೇಕೆ ಹೊರತು ತನ್ನ ಪಕ್ಷದ ಕಾರ್ಯಕರ್ತರನ್ನು ಪೀಡಿಸುವ ಕೆಲಸಕ್ಕಿಳಿಯಬಾರದು. ತಾನು ಬಳ್ಳಾರಿಯಿಂದ ಕೇವಲ 60 ಕಿಮೀ ದೂರ ಇರುವುದಾಗಿ ಹೇಳಿದ ರೆಡ್ಡಿ, ತಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಮುಂದುವರಿದರೆ, ವಿಧಾನ ಸೌಧದ ಒಳಗೆ ಮತ್ತು ಹೊರಗೆ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.

ಬಳ್ಳಾರಿ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಮತ್ತು ಶಾಸಕ ಗಾಲಿ ಜನಾರ್ಧನರೆಡ್ಡಿ (Gali Janardhan Reddy) ಬಳ್ಳಾರಿ ಜಿಲ್ಲೆಯ ಶಾಸಕರು ಮತ್ತು ಸಚಿವರನ್ನು ಎಚ್ಚರಿಸಿದರು. ವಿಷಯವವೇನೆಂದರೆ, ಬಳ್ಳಾರಿಯಲ್ಲಿ ಕೆಅರ್​ಪಿಪಿ ಕಾರ್ಯಕರ್ತರಿಗೆ (KRPP workers) ತೊಂದರೆ ನೀಡಲಾಗುತ್ತಿದೆಯಂತೆ. ತೊಂದರೆ ಕೊಡುತ್ತಿರುವವರು ಯಾವ ಪಕ್ಷದವರು ಅಂತ ನಿರ್ದಿಷ್ಟವಾಗಿ ರೆಡ್ಡಿ ಹೇಳಲಿಲ್ಲವಾದರೂ ಶಾಸಕರು ಮತ್ತು ಸಚಿವರು (MLAs and ministers) ಅಂತ ಮಾತ್ರ ಹೇಳಿದರು. ಜಿಲ್ಲೆಯ ಮಂತ್ರಿಗಳು ಮತ್ತು ಶಾಸಕರು ಬಳ್ಳಾರಿಯ ಜನ ತನ್ನನ್ನು ನೆನಪಿಗೆ ತಂದುಕೊಳ್ಳದಂಥ ಕೆಲಸಗಳನ್ನು ಮಾಡಿ ಅವರ ಮೆಚ್ಚುಗೆಗೆ ಪಾತ್ರರಾಗಬೇಕೆ ಹೊರತು ತನ್ನ ಪಕ್ಷದ ಕಾರ್ಯಕರ್ತರನ್ನು ಪೀಡಿಸುವ ಕೆಲಸಕ್ಕಿಳಿಯಬಾರದು. ತಾನು ಬಳ್ಳಾರಿಯಿಂದ ಕೇವಲ 60 ಕಿಮೀ ದೂರ ಇರುವುದಾಗಿ ಹೇಳಿದ ರೆಡ್ಡಿ, ತಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಮುಂದುವರಿದರೆ, ವಿಧಾನ ಸೌಧದ ಒಳಗೆ ಮತ್ತು ಹೊರಗೆ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.