ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ಬಬಲೇಶ್ವರ ಕ್ಷೇತ್ರದಿಂದ ₹ 25 ಲಕ್ಷ ದೇಣಿಗೆ ನೀಡುತ್ತೇವೆ: ಅಭಿಮಾನಿಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Apr 01, 2025 | 8:31 PM

ಬಸನಗೌಡ ಯತ್ನಾಳ್ ಅವರು ಹೊಸ ಪಕ್ಷ ಕಟ್ಟಿದರೆ ಅವರ ಜೊತೆ ಹೋಗುತ್ತೇವೆ, ಬಿಜೆಪಿಯಲ್ಲಿ ಮುಂದುವರಿಯುತ್ತೇನೆ ಅಂತ ಹೇಳಿದರೆ ಅವರ ಜೊತೆ ಇರುತ್ತೇವೆ, ಒಂದು ವೇಳೆ ಅವರು ಹೊಸ ಪಕ್ಷ ಕಟ್ಟುವುದಾದರೆ ಬಬಲೇಶ್ವರ ಕ್ಷೇತ್ರದಿಂದ ₹ 25 ಲಕ್ಷ ದೇಣಿಗೆಯನ್ನು ಪಕ್ಷಕ್ಕೆ ನೀಡುತ್ತೇವೆ, ಅವರೇನೇ ಮಾಡಿದರೂ ಅವರ ಜೊತೆ ಇರುತ್ತೇವೆ ಎಂದು ಅಭಿಮಾನಿಗಳು ಹೇಳುತ್ತಾರೆ.

ವಿಜಯಪುರ, ಏಪ್ರಿಲ್1: ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರಾಗಿರುವ ಬಿಜೆಪಿ ಕಾರ್ಯಕರ್ತರು ಶಾಸಕನ ಉಚ್ಚಾಟನೆಯನ್ನು (expulsion) ಮರುಪರಿಶೀಲಿಸುವಂತೆ ಪ್ರತಿಭಟನಾ ರ‍್ಯಾಲಿ ನಡೆಸಿದರು. ಈ ಸಂದರ್ಭದಲ್ಲಿ ಮಾತಾಡಿದ ಕಾರ್ಯಕರ್ತರೊಬ್ಬರು, ಹಿಂದೆ ಸೈಕಲ್ ತುಳಿದು ಪಕ್ಷ ಕಟ್ಟಿದ್ದಾಗಿ ಹೇಳುವ ಯಡಿಯೂರಪ್ಪನವರು ಈಗ ಸೈಕಲ್ ತುಳಿಯುವ ಅವಶ್ಯಕತೆ ಇಲ್ಲವೆಂದು ಹಿಂದೂತ್ವವಾದಿ ಮುಖಂಡರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆಯೇ? ತೇಜಸ್ವಿನಿ ಅನಂತಕುಮಾರ್, ಯತ್ನಾಳ್, ಸಿಟಿ ರವಿ, ಪ್ರತಾಪ್ ಸಿಂಹ ಮೊದಲಾದವರನ್ನೆಲ್ಲ ತುಳಿಯಲಾಗಿದೆ, ಯಡಿಯೂರಪ್ಪ ಮನೆಯಲ್ಲಿ 3-4 ಟಿಕೆಟ್ ನೀಡಬಹುದು, ಆದರೆ ಬೇರೆಯವರಿಗೆ ಮಾತ್ರ ಪರಿವಾರವಾದ ನಿಯಮ ಅನ್ವಯವಾಗುತ್ತದೆಯೇ ಎಂದು ಅವರು ಕೇಳಿದರು.

ಇದನ್ನೂ ಓದಿ:  ಯತ್ನಾಳ್ ಉಚ್ಚಾಟನೆಗೆ ಸಂಬಂಧಿಸಿದ ಪ್ರಶ್ನೆ ಕೇಳಿದಾಗ ಯಡಿಯೂರಪ್ಪ ನೋ ಕಾಮೆಂಟ್ಸ್ ಎಂದರು!

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.