ದೇವೇಗೌಡರ ಹಾಗೆ ಬಸವರಾಜ ಬೊಮ್ಮಾಯಿ ರಚನಾತ್ಮಕ ಸಲಹೆ ನೀಡಿದರೆ ಖಂಡಿತ ಪರಿಗಣಿಸುತ್ತೇವೆ: ಡಿಕೆ ಶಿವಕುಮಾರ್, ಡಿಸಿಎಂ

ಅರುಣ್​ ಕುಮಾರ್​ ಬೆಳ್ಳಿ

Updated on: Sep 19, 2023 | 11:26 AM

ದೆಹಲಿಯಲ್ಲಿರುವ ಕರ್ನಾಟಕದ ಲೀಗಲ್ ತಂಡದಲ್ಲಿ ಫಾಲಿ ನಾರಿಮನ್ ಅವರ ಶಿಷ್ಯರೇ ಇರುವುದರಿಂದ ಕಾವೇರಿ ನೀರು ನಿರ್ವಹಣಾ ಪ್ರಧಿಕಾರ ಮತ್ತು ಸುಪ್ರೀಮ್ ಕೋರ್ಟ್ ನಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಸಮರ್ಥವಾಗಿ ಮಂಡಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ (HD Devegowda) ಅವರು ಹಿಂದೆ ಸಂಸತ್ತಿನಲ್ಲಿ ನೀಡಿದ್ದ ಔಟ್ ಆಫ್ ದಿ ಕೋರ್ಟ್ ಸೆಟ್ಲ್ ಮೆಂಟ್ ಸಲಹೆಯನ್ನು ಸ್ವಾಗತಿಸಿದರು ಆದರೆ ಇದೇ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ನೀಡುತ್ತಿರುವ ಹೇಳಿಕೆಗಳನ್ನು ಖಂಡಿಸಿದರು. ಬೊಮ್ಮಾಯಿ ಅವರು ಹಿಂದೆ ನೀರಾವರಿ ಸಚಿವ ಮತ್ತು ಮುಖ್ಯಮಂತ್ರಿಯೂ ಆಗಿದ್ದವರು, ಹೀಗಾಗಿ ಅವರು ಸಮಸ್ಯೆಯನ್ನು ಉಲ್ಬಣಗೊಳಿಸುವ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದರು. ಬೊಮ್ಮಾಯಿ ನೀಡುವ ಸಲಹೆಯನ್ನು ಸರ್ಕಾರ ತಿರಸ್ಕರಿಸುತ್ತದೆ ಅಂತೇನೂ ಇಲ್ಲ, ಆದರೆ ಅದು ರಚನಾತ್ಮಕವಾಗಿರಬೇಕು ಎಂದು ಶಿವಕುಮಾರ್ ಹೇಳಿದರು. ದೆಹಲಿಯಲ್ಲಿರುವ ಕರ್ನಾಟಕದ ಲೀಗಲ್ ತಂಡದಲ್ಲಿ ಫಾಲಿ ನಾರಿಮನ್ ಅವರ ಶಿಷ್ಯರೇ ಇರುವುದರಿಂದ ಕಾವೇರಿ ನೀರು ನಿರ್ವಹಣಾ ಪ್ರಧಿಕಾರ ಮತ್ತು ಸುಪ್ರೀಮ್ ಕೋರ್ಟ್ ನಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಸಮರ್ಥವಾಗಿ ಮಂಡಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.