ಕೋಲಾರದಲ್ಲಿ ಬಿಜೆಪಿ ಸರ್ಕಾರ ಬಡವರಿಗೆ ಮನೆ ಕೊಟ್ಟಿದ್ದು ಪ್ರೂವ್ ಆದರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್

Updated on: Jun 16, 2025 | 8:12 PM

ಗ್ಯಾರಂಟಿ ಯೋಜನೆಗಳಿಗೆ ಕನಿಷ್ಠ ₹ 60,000 ಕೋಟಿ ಪ್ರತಿವರ್ಷ ಖರ್ಚಾಗುತ್ತದೆ, ಹಾಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹೊಸತರಲ್ಲಿ ಬಿಜೆಪಿ ನಾಯಕರು ಹೇಳುತ್ತಿದ್ದರು, ಅದರೆ ಸರ್ಕಾರ ರಚನೆಯಾದ ಒಂದು ತಿಂಗಳು ಅವಧಿಯಲ್ಲೇ ಸಿದ್ದರಾಮಯ್ಯ ಸರ್ಕಾರ ಎಲ್ಲ ಯೋಜನೆಗಳನ್ನು ಜಾರಿಗೆ ತಂದಿತು ಎಂದು ಜಮೀರ್ ಹೇಳಿದರು.

ಕೋಲಾರ, ಜೂನ್ 16: ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಇಂದು ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತ ಬಿಜೆಪಿ ನಾಯಕರಿಗೆ (BJP leaders) ಸವಾಲೆಸೆದರು. ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಕೇವಲ ಪಂಚ ಗ್ಯಾರಂಟಿಗಳ ಭರವಸೆಯನ್ನು ಮಾತ್ರ ನೀಡಿತ್ತು, ಸ್ಲಂ ನಿವಾಸಿಗಳಿಗೆ ಮತ್ತು ರಾಜೀವ್ ಗಾಂಧಿ ಯೋಜನೆ ಅಡಿ ಮನೆಗಳನ್ನು ಕೊಡುತ್ತೇವೆ ಅಂತ ಹೇಳಿರಲಿಲ್ಲ, ಆದರೆ ತಮ್ಮ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿಯಿದೆ, ಹಾಗಾಗೇ ಮನೆಗಳನ್ನು ನೀಡಿದ್ದೇವೆ, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಒಂದೇಒಂದು ಮನೆ ಕೊಟ್ಟಿರುವುದನ್ನು ಸಿದ್ಧಮಾಡಿದರೆ ತಾನು ರಾಜಕೀಯದಿಂದ ನಿವೃತ್ತನಾಗೋದಾಗಿ ಸಚಿವ ಜಮೀರ್ ಹೇಳಿದರು.

ಇದನ್ನೂ ಓದಿ:  ಜಮೀರ್ ಅಹ್ಮದ್ ಹೇಳಿದ ಕೂಡಲೇ ಏನೂ ಆಗಲ್ಲ: ಮುಸ್ಲಿಂ ಮೀಸಲಾತಿ ಹೆಚ್ಚಳ ಬಗ್ಗೆ ಪ್ರಲ್ಹಾದ್ ಜೋಶಿ ತಿರುಗೇಟು

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 16, 2025 04:21 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More