AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತ ನಡೆಸಲಾಗುತ್ತಿಲ್ಲ ಅಂತಾದ್ರೆ ಬೊಮ್ಮಾಯಿ ಅಧಿಕಾರ ಬಿಟ್ಟು ತೊಲಗಲಿ: ಸಿದ್ದರಾಮಯ್ಯ

ಆಡಳಿತ ನಡೆಸಲಾಗುತ್ತಿಲ್ಲ ಅಂತಾದ್ರೆ ಬೊಮ್ಮಾಯಿ ಅಧಿಕಾರ ಬಿಟ್ಟು ತೊಲಗಲಿ: ಸಿದ್ದರಾಮಯ್ಯ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 30, 2022 | 1:32 PM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸರ್ಕಾರ ನಡೆಸುವುದು ಸಾಧ್ಯವಿಲ್ಲ ಮತ್ತು ವಿರೋಧ ಪಕ್ಷದ ಟೀಕೆ ಕೇಳಿಸಿಕೊಳ್ಳುವಷ್ಟು ಸೌಜನ್ಯತೆ ಇಲ್ಲ ಅಂತಾದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಸರಣಿ ಹತ್ಯೆಗಳು ನಡೆಯುತ್ತಿರುವುದು ಸರ್ಕಾರದ ವೈಫಲ್ಯವಲ್ಲದೆ ಮತ್ತೇನೂ ಅಲ್ಲ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಮುಖ್ಯಮಂತ್ರಿಗಳು ಮಂಗಳೂರಲ್ಲಿರುವಾಗಲೇ ಅಲ್ಲಿ ಮತ್ತೊಂದು ಕೊಲೆ (murder) ನಡೆಯುತ್ತದೆ ಅಂದರೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಅಂತಲೇ ಆರ್ಥ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಸರ್ಕಾರ ನಡೆಸುವುದು ಸಾಧ್ಯವಿಲ್ಲ ಮತ್ತು ವಿರೋಧ ಪಕ್ಷದ ಟೀಕೆ ಕೇಳಿಸಿಕೊಳ್ಳುವಷ್ಟು ಸೌಜನ್ಯತೆ ಇಲ್ಲ ಅಂತಾದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.