Tender Issue | ಕಾಂಗ್ರೆಸ್ ನಾಯಕರಲ್ಲಿ ದಾಖಲೆಗಳಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ದೂರು ಸಲ್ಲಿಸಲಿ: ಸಿಟಿ ರವಿ
ಕಾಂಗ್ರೆಸ್ ನಾಯಕರಾಗಲೀ, ಶೇಖರ್ ಅವರಾಗಲೀ ವಿಷಯವನ್ನು ಸದನದಲ್ಲಿ ಯಾಕೆ ಪ್ರಸ್ತಾಪಿಸಲಿಲ್ಲ? ಅವರಲ್ಲಿ ದಾಖಲೆಗಳಿದ್ದರೆ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಲಿ ಎಂದು ರವಿ ಹೇಳಿದರು.
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಮತ್ತೊಂದು ಆರೋಪ ತಲೆಯೆತ್ತಿದೆ. ಸರ್ಕಾರ ಧಾವಂತದಲ್ಲಿ ಟೆಂಡರ್ ಗಳನ್ನು ಕರೆದು ಅಲಾಟ್ ಮಾಡಿದೆ ಎಂದು ಬಿಜೆಪಿ ಶಾಸಕರೇ ಆಗಿರುವ ಗೂಳಿಹಟ್ಟಿ ಶೇಖರ್ (Goolihatti Shekhar) ದಾಖಲೆ ಸಮೇತ ಅರೋಪ ಮಾಡಿರುವುದನ್ನು ಆಧಾರವಾಗಿಟ್ಟುಕೊಂಡು ಕಾಂಗ್ರೆಸ್ (Congress) ಸರ್ಕಾರದ ಮೇಲೆ ದಾಳಿ ನಡೆಸುತ್ತಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನ ಸೌಧದ ಬಳಿ ಮಾಧ್ಯಮಗಳೊಡನೆ ಮಾತಾಡಿದ ಬಿಜೆಪಿ ಶಾಸಕ ಸಿಟಿ ರವಿ (CT Ravi), ಕಾಂಗ್ರೆಸ್ ಆಧಾರವಿಲ್ಲದೆ ಆರೋಪ ಮಾಡುವುದನ್ನು ಕರಗತ ಮಾಡಿಕೊಂಡಿದೆ ಎಂದರು. ಕಾಂಗ್ರೆಸ್ ನಾಯಕರಾಗಲೀ, ಶೇಖರ್ ಅವರಾಗಲೀ ವಿಷಯವನ್ನು ಸದನದಲ್ಲಿ ಯಾಕೆ ಪ್ರಸ್ತಾಪಿಸಲಿಲ್ಲ? ಅವರಲ್ಲಿ ದಾಖಲೆಗಳಿದ್ದರೆ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಲಿ ಎಂದು ರವಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ