ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರನ್ನು ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ದರ್ಶನ್ ಈ ರೀತಿಯ ಕೃತ್ಯ ಮಾಡಿಲ್ಲ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ತಪ್ಪು ನಡೆದಿದ್ದರೆ ಶಿಕ್ಷೆ ಆಗಲಿ ಎಂದು ಹೇಳಿದ್ದಾರೆ. ಈ ಮೊದಲು ‘ಕೋಟಿ’ ಸಿನಿಮಾ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಡಾಲಿ ಧನಂಜಯ್ ಅವರಿಗೆ ಕೇಳಿದಾಗ ‘ಸಿನಿಮಾ ಬಗ್ಗೆ ಮಾತನಾಡೋಣ’ ಎಂದಿದ್ದರು. ಈಗ ಅವರಿಗೆ ಮತ್ತೆ ಇದೇ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ತಪ್ಪು ನಡೆದಿದ್ದರೆ ಶಿಕ್ಷೆ ಆಗಲಿ. ನಡೆದ ಕೃತ್ಯನ್ನು ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಬದುಕು ಅವಕಾಶಗಳನ್ನು ಕೊಟ್ಟೇ ಕೊಡುತ್ತದೆ. ಮತ್ತೆ ಬಂದು ದರ್ಶನ್ ಪ್ರೇಕ್ಷಕರನ್ನು ಮನರಂಜಿಸಲಿ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.