ಮುಸಲ್ಮಾನರಿಗೆ ರಂಜಾನ್​ನಲ್ಲಿ ಬೇಗ ಮನೆಗೆ ಅವಕಾಶ ನೀಡೋದಾದರೆ ಬೇರೆ ಧರ್ಮಗಳ ಆಚರಣೆಗಳಿಗೂ ಅವಕಾಶ ನೀಡಿ: ಸಿಟಿ ರವಿ

ಅರುಣ್​ ಕುಮಾರ್​ ಬೆಳ್ಳಿ

Updated on: Feb 21, 2025 | 8:34 PM

ಹಿಂದೂಗಳು ಮಹಾಶಿವರಾತ್ರಿ ಸಮಯದಲ್ಲಿ ರಾತ್ರಿಯಿಡೀ ಭಜನೆ ಮಾಡುತ್ತಾರೆ, ಏಕಾದಶಿ ಸಂದರ್ಭದಲ್ಲಿ ಉಪವಾಸ ಮಾಡುತ್ತಾರೆ . ಹಾಗೆಯೇ ಎಲ್ಲ ಧರ್ಮದವರು ಒಂದೊಂದು ಬಗೆಯ ಆಚರಣೆ ಮಾಡುತ್ತಾರೆ, ಮುಸಲ್ಮಾನರಿಗೆ ಬೇಗ ಮನೆಗೆ ಹೋಗಲು ಅವಕಾಶ ನೀಡಬಾರದು ಅಂತ ಹೇಳುತ್ತಿಲ್ಲ, ಅವರಿಗೆ ಅವಕಾಶ ಕೊಡುವುದಾದರೆ ಎಲ್ಲರಿಗೂ ಕೊಡಲಿ ಅನ್ನೋದೇ ತಮ್ಮ ವಾದ ಎಂದು ಸಿಟಿ ರವಿ ಹೇಳಿದರು.

ಬೆಂಗಳೂರು: ರಂಜಾನ್ ತಿಂಗಳಲ್ಲಿ ಮುಸ್ಲಿಂ ಸಮುದಾಯದ ಸರ್ಕಾರಿ ನೌಕರರು ಒಂದು ಗಂಟೆ ಮೊದಲು ಕಚೇರಿಯಿಂದ ಮನೆಗೆ ಹೋಗುವ ಅವಕಾಶ ಕೇಳಿದ್ದು ಚರ್ಚೆಗೆ ಗ್ರಾಸವಾಗುತ್ತಿದೆ. ನಗರದಲ್ಲಿಂದು ಪ್ರತಿಕ್ರಿಯೆ ನೀಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿಲುವೇನು ಅನ್ನೋದಿನ್ನೂ ಗೊತ್ತಾಗಿಲ್ಲ, ಜಾತ್ಯಾತೀತ ಸರ್ಕಾರ ಏನು ಮಾಡುತ್ತದೆ ಅಂತ ನೋಡಬೇಕಿದೆ, ಜಾತ್ಯಾತೀತ ಧೋರಣೆಯನ್ನು ಸರ್ಕಾರ ಹೇಗೆ ನಿಭಾಯಿಸುತ್ತದೆ, ಜಾತ್ಯಾತೀತತೆ ಅಂದರೆ ಸರ್ವರಿಗೂ ಸಮಾನ ಆವಕಾಶ ನೀಡಬೇಕು, ಒಬ್ಬರಿಗೆ ಹೆಚ್ಚು ಮತ್ತೊಬ್ಬರಿಗೆ ಕಡಿಮೆ ಅಂತ ಮಾಡಲಾಗಲ್ಲ, ಸರ್ವಧರ್ಮ ಸಮಪಾಲು ಅಂತ ಡಾ ಬಿಅರ್ ಅಂಬೇಡ್ಕರ್ ಹೇಳಿದರು, ಅವರ ಜಾತ್ಯಾತೀತತೆ ವ್ಯಾಖ್ಯಾನದಲ್ಲಿ ಓಲೈಕೆಗೆ ಅವಕಾಶವಿಲ್ಲ ಎಂದು ರವಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಹೆಬ್ಬಾಳ್ಕರ್​ರನ್ನು ನಿಂದಿಸಿದ ಪ್ರಕರಣ ರದ್ದು ಕೋರಿ ಸಿಟಿ ರವಿ ಅರ್ಜಿ: ಹೈಕೋರ್ಟ್​ನಲ್ಲಿ ವಾದ, ಪ್ರತಿವಾದ ಹೀಗಿತ್ತು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.