ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡಲಾಗುವುದು: ಯತ್ನಾಳ್​

Edited By: ವಿವೇಕ ಬಿರಾದಾರ

Updated on: Aug 10, 2025 | 9:31 PM

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಗವಿಷಿದ್ದಪ್ಪ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ನೀಡುವ ಭರವಸೆ ನೀಡಿದ್ದಾರೆ. ಈ ಕೊಲೆಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಯತ್ನಾಳ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಆರೋಪಿಸಿದ್ದಾರೆ. ಪ್ರಕರಣದ ತನಿಖೆ ಮತ್ತು ರಾಜಕೀಯ ಪರಿಣಾಮಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಕೊಪ್ಪಳ, ಆಗಸ್ಟ್​ 10: ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕ ಗವಿಸಿದ್ದಪ್ಪ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡಲಾಗುವುದು. ಈ ರೀತಿಯ ಅಭಿಯಾನ ಆರಂಭಿಸುತ್ತೇವೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಹಿಂದೂಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಮರಲ್ಲಿದೆ. ರಿಲ್ಸ್‌ನಲ್ಲಿ ಮಚ್ಚು ತೋರಿಸಿದ್ದಾನೆ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಗವಿಸಿದ್ದಪ್ಪ ಪ್ರೀತಿಸಿದ್ದ ಹುಡುಗಿಯನ್ನೂ ಅರೆಸ್ಟ್ ಮಾಡಬೇಕು. ಲವ್ ಜಿಹಾದ್ ಮಾಡಿದಾಗ ಮುಸ್ಲಿಮರಿಗೆ ರಕ್ಷಣೆ ನೀಡಲಾಗುತ್ತೆ. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಸದನದಲ್ಲಿ ಪ್ರಸ್ತಾಪಿಸುವೆ. ಮಚ್ಚು ತೆಗೆದುಕೊಂಡು ಓಡಾಡುವವರಿಗೆ ರಾಜ್ಯ ಸರ್ಕಾರದ ಬೆಂಬಲವಿದೆ ಎಂದು ವಾಗ್ದಾಳಿ ಮಾಡಿದರು.

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More