ನನ್ನನ್ನು ಆರೆಸ್ಸೆಸ್ ಏಜೆಂಟ್ ಎನ್ನುವ ಮುಬಾರಕ್ ಒಬ್ಬ ತಾಲಿಬಾನಿ: ಕೊಟ್ಟೂರು ಮಂಜುನಾಥ್, ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Aug 28, 2024 | 3:13 PM

ಮುಬಾರಕ್ ಹೇಳಿರುವಂತೆ ತಾನು ಆರೆಸ್ಸೆಸ್ ಏಜೆಂಟ್ ಹೌದು, ತಾನು ಈ ಭಾಗದ ಶಾಸಕ ಮತ್ತು ಯಾರನ್ನು ಎಲ್ಲಿಗೆ ಕರೆಸಿ ಮಾತಾಡಬೇಕು ಅನ್ನೋದು ತನ್ನ ವಿವೇಚನೆಗೆ ಬಿಟ್ಟ ವಿಷಯ, ಗೆಸ್ಟ್ ಹೌಸ್ ಗಳ ಬಗ್ಗೆ ಪ್ರಶ್ನಿಸುವ ಅಧಿಕಾರ ಮುಬಾರಕ್ ಗೆ ಇಲ್ಲ ಎಂದು ಮಂಜುನಾಥ್ ಹೇಳಿದರು.

ಕೋಲಾರ: ಸ್ಥಳೀಯ ಶಾಸಕ ಕೊತ್ತೂರು ಮಂಜುನಾಥ್ ಮತ್ತು ನಗರಸಭೆಯ ಮಾಜಿ ಅಧ್ಯಕ್ಷ ಮುಬಾರಕ್ ನಡುವೆ ಹಲವಾರು ದಿನಗಳಿಂದ ವೈಷಮ್ಯ ಹೆಡಯೆತ್ತಿದೆ. ಮುಬಾರಕ್ ಮಾತಾಡುವ ಸಂದರ್ಭದಲ್ಲಿ ತನ್ನನ್ನು ಆರೆಸ್ಸೆಸ್ ಏಜೆಂಟ್ ಎಂದು ಕರೆದಿರುವುದಕ್ಕೆ ಕೆರಳಿರುವ ಮಂಜುನಾಥ್ ನನ್ನನ್ನು ಪ್ರಶ್ನಿಸಲು ಅವನ್ಯಾರು, ಅವನೊಬ್ಬ ತಾಲಿಬಾನಿ ಮತ್ತು ಅವನಿಂದಾಗಿ 50-60 ಕುಟುಂಬಗಳು ಸರ್ವನಾಶವಾಗಿವೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೆಎಎಸ್​​ ಪ್ರಿಲಿಮ್ಸ್​ ಪರೀಕ್ಷೆ: ಕೋಲಾರದಲ್ಲಿ ಪರೀಕ್ಷಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಿಸಿದ ಡಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.