ಚೀಟಿಯಲ್ಲಿ ಬರೆದಿದ್ದುದನ್ನು ಹೇಳಿದರೆ ಎರಡೂ ಪಕ್ಷಗಳ ಮಹಾನ್ ನಾಯಕರು ಮನೆಗೆ ಹೋಗುತ್ತಾರೆ: ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 24, 2025 | 2:59 PM

ಚೀಟಿಯನ್ನು ಯಾವ ಪಕ್ಷದವರು ಕಳಿಸಿದ್ದು ಅಂತ ತನಗೆ ಗೊತಿಲ್ಲ, ಆದರೆ ಅದರಲ್ಲಿ ಬರೆದಿದ್ದನ್ನು ಹೇಳಿದರೆ ದೊಡ್ಡ ಕ್ರಾಂತಿಯೇ ನಡೆದು ಹೋಗುತ್ತದೆ, ಅದರಲ್ಲಿ ಏನು ಬರೆದಿತ್ತು ಅಂತ ಈಗ ಹೇಳಲಾರೆ, ಮುಂಬರುವ ದಿನಗಳಲ್ಲಿ ಖಂಡಿತವಾಗಿಯೂ ಹೇಳುತ್ತೇನೆ, ಅದನ್ನು ಹೇಳಿದರೆ ಎರಡೂ ಪಕ್ಷಗಳ ಮಹಾನ್ ನಾಯಕರು ಮನೆಗೆ ಹೋಗಬೇಕಾಗುತ್ತದೆ ಎಂದು ಬಸನಗೌಡ ಪಾಟೀಲ್ ಹೇಳಿದರು.

ನವದೆಹಲಿ, 24 ಮಾರ್ಚ್: ವಿಧಾನಸಭಾ ಬಜೆಟ್ ಅಧಿವೇಶನ ಸಮಯದಲ್ಲಿ ಸಚಿವ ಕೆಎನ್ ರಾಜಣ್ಣ ಹನಿ ಟ್ರ್ಯಾಪ್ ವಿಷಯವನ್ನು ಪ್ರಸ್ತಾಪಿಸುತ್ತಿದಾಗ ಸದನದಲ್ಲಿ ಹರಿದಾಡಿದ ಚೀಟಿಯೊಂದರ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ದೆಹಲಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಆ ಚೀಟಿ ಯಾರು ಕಳಿಸಿದ್ದು ಅಂತ ಗೊತ್ತಿಲ್ಲ, ಆದರೆ ಹಿರಿಯ ಸಚಿವ ರಾಜಣ್ಣನವರು ಬಹಿರಂಗವಾಗೇ ಹನಿ ಟ್ರ್ಯಾಪ್ ಪ್ರಯತ್ನ ತನ್ನ ಮೇಲೆ ನಡೆಯುತ್ತಿದೆ ಅಂತ ಹೇಳಿದ್ದಾರೆ, ಅದನ್ನು ಯಾಕೆ ಮಾಡುತ್ತಿದ್ದಾರೆ, ಯಾಕೆ ಬ್ಲ್ಯಾಕ್ ಮೇಲ್ ಪ್ರಯತ್ನ ನಡೆದಿದೆ ಅಂತ ಜನತೆಗೆ ಗೊತ್ತಾಗಬೇಕು, ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ ಅದರೆ ಅವರ ಮಾತಿನ ಧಾಟಿ ನೋಡಿದರೆ ಅವರದ್ದೇ ಪಕ್ಷದ ಮಂತ್ರಿಯೊಬ್ಬ ಭಾಗಿಯಾಗಿರುವಂತಿದೆ ಎಂದು ಯತ್ನಾಳ್ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ರನ್ಯಾ ಚಿನ್ನ ಸ್ಮಗ್ಲಿಂಗ್ ಪ್ರಕರಣ: ಸಚಿವರ ನಂಟಿನ ರಹಸ್ಯದ ಬಗ್ಗೆ ಯತ್ನಾಳ್ ಸ್ಫೋಟಕ ಸುಳಿವು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.