‘ನಾನು ತಪ್ಪು ಮಾಡಿದ್ದರೆ ಪೊರಕೆಯಿಂದ ನನಗೆ ಹೊಡೆಯಿರಿ’: ಸಿಎಂ ಡಿಕೆ ಶಿವಕುಮಾರ್
ಮುಖ್ಯಾಂಶಗಳು
- ಬಲವಂತವಾಗಿ ಜಮೀನು ತೆಹೆದುಕೊಳ್ಳುವ ಅವಶ್ಯಕತೆ ನಮ್ಮ ಸರ್ಕಾರಕ್ಕಿಲ್ಲ
- ರೈತರು ಸ್ವಯಂ ಇಚ್ಛೆಯಿಂದ ಜಮೀನು ಕೊಟ್ಟರೆ ತೆಗೆದುಕೊಳ್ಳುತ್ತೇವೆ
- ನನಗೆ ಹೊಡೆಯಿರಿ ಎಂದ ಸಿಎಂ ಡಿ.ಕೆ.ಶಿವಕುಮಾರ್
ಬಿಡದಿ ಟೌನ್ಶಿಪ್ ಯೋಜನೆಯು ಹಿಂದಿನ ಸರ್ಕಾರಗಳಿಂದ ಮುಂದುವರಿದ ಪ್ರಕ್ರಿಯೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿಯ ಘಟನೆ ರಾಜಕೀಯ ಪ್ರೇರಿತ ಎಂದಿರುವ ಅವರು, ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರ ಅವಧಿಯ ಮಾರ್ಗದರ್ಶನವನ್ನೂ ಉಲ್ಲೇಖಿಸಿದ್ದಾರೆ.
ಬೆಂಗಳೂರು, ಜುಲೈ 15: ‘‘ತಾಯಂದಿರು ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆಯುವ ಅವಶ್ಯಕತೆ ಇಲ್ಲ, ಬೇಕಾದರೆ ನನಗೆ ಹೊಡೆಯಿರಿ’’ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬಿಡದಿ ಟೌನ್ಶಿಪ್ (Bidadi Township) ಕುರಿತ ಸರ್ವೆಗೆ ಹೋಗಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರವಾಗಿ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಬಿಡದಿಯಲ್ಲಿ ನಡೆದ ಘಟನೆಯಿಂದ ಮನಸ್ಸಿಗೆ ನೋವಾಗಿದೆ. ಪೊರಕೆಯಿಂದ ಅಧಿಕಾರಿಗಳಿಗೆ ಹೊಡೆಯುವ ಅವಶ್ಯಕತೆ ಇಲ್ಲ. ಬೇಕಾದರೆ ನನಗೆ ಹೊಡೆಯಲಿ, ನಾನು ಹೊಡಿಸಿಕೊಳ್ಳುವುದಕ್ಕೆ ರೆಡಿ ಇದ್ದೇನೆ. ಬಲವಂತವಾಗಿ ಜಮೀನು ತೆಹೆದುಕೊಳ್ಳುವ ಅವಶ್ಯಕತೆ ನಮ್ಮ ಸರ್ಕಾರಕ್ಕಿಲ್ಲ’’ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
