ಸಂವಿಧಾನ ಬದಲಿಸುವ ಮಾತಾಡಿದ್ದರೆ ರಾಜಕೀಯದಿಂದ ನಿವೃತ್ತನಾಗ್ತೀನಿ: ಡಿಕೆ ಶಿವಕುಮಾರ್

Updated on: Mar 25, 2025 | 8:00 PM

ಸಂವಿಧಾನ ರಕ್ಷಣೆ ಮಾಡುವ ಕೆಲಸವನ್ನು ಕಾಂಗ್ರೆಸ್ ಮೊದಲಿಂದಲೂ ಮಾಡಿಕೊಂಡು ಬಂದಿದೆ, ಅದನ್ನು ಬದಲಿಸುತ್ತೇವೆಂದು ಹೇಳಿದ್ದು ಬಿಜೆಪಿಯವರು, ಪಕ್ಷದ ದೆಹಲಿ ನಾಯಕರು ಇದರ ಬಗ್ಗೆ ತನಗೆ ಸ್ಪಷ್ಟನೆ ಕೇಳಿದ್ದಾರೆ, ಅವರೂ ಸಹ ಸಂದರ್ಶನವನ್ನು ನೋಡಿ ತಾನು ಹೇಳಿದ್ದನ್ನು ಮನವರಿಕೆ ಮಾಡಿಕೊಂಡಿದ್ದಾರೆ, ತಾನು ದೆಹಲಿಗೆ ಹೋದಾಗ ಬಿಜೆಪಿಯವರು ಕಪ್ಪುಬಾವುಟ ಪ್ರದರ್ಶನ ಮಾಡೋದಿದ್ದರೆ ಮಾಡಲಿ ಎಂದು ಶಿವಕುಮಾರ್ ಹೇಳಿದರು

ಬೆಂಗಳೂರು, 25 ಮಾರ್ಚ್: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂವಿಧಾನ ಬದಲಿಸಬೇಕೆಂದು ಸಂದರ್ಶನದಲ್ಲಿ ಹೇಳಲು ತನಗೇನೂ ತಲೆಕೆಟ್ಟಿಲ್ಲ, ತಾನು ಹೇಳಿದ್ದೇನೆಂದು ಹೇಳುತ್ತಿರುವವರಿಗೆ ತಲೆ ಕೆಟ್ಟಿರಬೇಕು, ಹಾಗೇನಾದರೂ ಹೇಳಿದ್ದರೆ ರಾಜಕೀಯದಿಂದ ನಿವೃತ್ತನಾಗ್ತೀನಿ, ತನ್ನ ಸವಾಲು ಎದುರಿಸಲು ಬಿಜೆಪಿ ನಾಯಕರು ಸಿದ್ಧರಿದ್ದಾರಾ ಎಂದು ಶಿವಕುಮಾರ್ ಹೇಳಿದರು. ತಾನು ಸಂದರ್ಶನದಲ್ಲಿ ಹೇಳಿದ್ದು ಸತ್ಯ ಮಾತ್ರ, ಅದನ್ನು ಜೀರ್ಣಿಸಿಕೊಳ್ಳಲಾಗದೆ ಬಿಜೆಪಿಯವರು ಇಲ್ಲಸಲ್ಲದ ಮಾತುಗಳನ್ನಾಡುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಶಿವಕುಮಾರ್ ವಿರುದ್ಧ ಆರೋಪ ಮಾಡೋದು ಬಿಟ್ಟು ತನ್ನ ವಿರುದ್ಧ ಮಾತಾಡುತ್ತಿರುವವರ ಮೇಲೆ ಮುನಿರತ್ನ ಕೇಸ್ ಹಾಕಲಿ: ಸೋಮಶೇಖರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More