ಬೆಂಗಳೂರು: ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಗೃಹಸಚಿವ ಜಿ ಪರಮೇಶ್ವರ (G Parameshwara) ಎರಡೂವರೆ ವರ್ಷಗಳ ನಂತರ ತಾವು ಸಚಿವ ಸ್ಥಾನ ತ್ಯಾಗ ಮಾಡುವುದಿಲ್ಲವೆಂದು ಹೇಳಿದರು. ಆಹಾರ ಮತ್ತ ನಾಗರಿಕ ಪೂರೈಕೆ ಖಾತೆ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಸಿದ್ದರಾಮಯ್ಯ ಸರ್ಕಾರದ (Siddaramaiah Government) ಅರ್ಧ ಅವಧಿ ಕೊನೆಗೊಂಡ ಬಳಿಕ ಸಂಪುಟದಲ್ಲಿರುವ ಹಿರಿಯ ಸಚಿವರು ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಅಂತ ಹೇಳಿದ್ದಕ್ಕೆ ಪ್ರತಿಕ್ರಿಯೆ ನೀಡುತ್ತಾ ಪರಮೇಶ್ವರ ಮೇಲಿನಂತೆ ಹೇಳಿದರು. ಸಚಿವ ಸ್ಥಾನ ತ್ಯಾಗ ಮಾಡುವುದು ಅವರ ವೈಯಕ್ತಿಕ ಅಭಿಪ್ರಾಯ, ಅವರು ಹೇಳಿದ್ದರಲ್ಲಿ ತಪ್ಪೇನೂ ಇಲ್ಲ, ಆದರೆ ತಾನು ಮಾತ್ತ ಸಚಿವ ಸ್ಥಾನ ಬಿಟ್ಟು ಕೊಡುವುದಿಲ್ಲ ಎಂದು ಪರಮೇಶ್ವರ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ