ಸಿಟಿ ರವಿಯನ್ನು ಸಮರ್ಥಿಸಿಕೊಳ್ಳುತ್ತೇನೆ, ಆದರೆ ಗುಡಿಯೊಳಗೆ ಹೋದ ವಿಡಿಯೋ ವೈರಲ್ ಮಾಡಿದರೆ ಬೇರೆ ಹೇಳಿಕೆ ನೀಡುತ್ತೇನೆ! ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 23, 2023 | 3:52 PM

ಒಂದು ಪಕ್ಷ ಅವರು ಗುಡಿಯೊಳಗೆ ಹೋದ ದೃಶ್ಯವನ್ನು ಮಾಧ್ಯಮದವರು ವೈರಲ್ ಮಾಡಿದರೆ ಅಗ ಬೇರೆ ಹೇಳಿಕೆ ನೀಡುವುದಾಗಿ ವಿಜಯಪುರ ಶಾಸಕ ಹೇಳಿದರು.

ಬೆಂಗಳೂರು: ಬೇರೆ ಸಮಯದಲ್ಲಾಗಿದ್ದರೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಭಟ್ಕಳದಲ್ಲಿ ಮಾಂಸಹಾರ ಸೇವಿಸಿ ಹಿಂದೂ ದೇವಾಲಯ ಪ್ರವೇಶಿಸಿದ ಸಿಟಿ ರವಿಯವರನ್ನು (CT Ravi) ಸಮರ್ಥಿಸಿಕೊಳ್ಳುತ್ತಿರಲಿಲ್ಲ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಎಚ್ಚರಿಕೆ ನಂತರ ಯತ್ನಾಳ್ ಬಾಯಿಗೆ ಲಗಾಮು ಹಾಕಿದ್ದಾರೆ. ಸಿಟಿ ರವಿ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ನಿಜವಾದರೂ ಹೊರಗಿನಿಂದಲೇ ದೇವರಿಗೆ ನಮಸ್ಕಾರ ಮಾಡಿದ್ದಾರೆ, ಗರ್ಭಗುಡಿಯೊಳಗೆ ಪ್ರವೇಶ ಮಾಡಿಲ್ಲ ಎಂದು ಯತ್ನಾಳ್ ಹೇಳಿದರು. ಒಂದು ಪಕ್ಷ ಅವರು ಗುಡಿಯೊಳಗೆ ಹೋದ ದೃಶ್ಯವನ್ನು ಮಾಧ್ಯಮದವರು ವೈರಲ್ ಮಾಡಿದರೆ ಅಗ ಬೇರೆ ಹೇಳಿಕೆ ನೀಡುವುದಾಗಿ ವಿಜಯಪುರ ಶಾಸಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.