AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳು ಕಮೀಶನ್ ಕೇಳಿದ್ದರೆ ಕೆಂಪಣ್ಣನವರು ನಾಗಮೋಹನ್ ದಾಸ್ ಸಮಿತಿಗೆ ದೂರು ಸಲ್ಲಿಸಲಿ: ಸಿದ್ದರಾಮಯ್ಯ

ಅಧಿಕಾರಿಗಳು ಕಮೀಶನ್ ಕೇಳಿದ್ದರೆ ಕೆಂಪಣ್ಣನವರು ನಾಗಮೋಹನ್ ದಾಸ್ ಸಮಿತಿಗೆ ದೂರು ಸಲ್ಲಿಸಲಿ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 09, 2024 | 3:00 PM

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಆರೋಪಗಳನ್ನು ತನಿಖೆ ಮಾಡಲು ನಿವೃತ್ತ ಹೈ ಕೋರ್ಟ್ ನ್ಯಾಯಾಧೀಶ ಹೆಚ್ ಎನ್ ನಾಗಮೋಹನ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಕೆಂಪಣ್ಣನವರಾಗಲೀ ಬೇರೆ ಯಾರೇ ಗುತ್ತಿಗೆದಾರನಾಗಲೀ ಆಯೋಗಕ್ಕೆ ದೂರು ಸಲ್ಲಿಸಲು ಮುಕ್ತರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗ: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಮತ್ತು ಅವರ ಆರೋಪಗಳು ಮತ್ತೇ ಮುನ್ನೆಲೆಗೆ ಬಂದಿವೆ. ಈ ಬಾರಿ ಅವರು ಕಾಂಗ್ರೆಸ್ ಶಾಸಕರು ಮತ್ತು ಅಧಿಕಾರಿಗಳ ಮೇಲೆ 40 ಪರ್ಸೆಂಟ್ ಕಮೀಶನ್ (40% commission) ಕೇಳುವ ಆರೋಪ ಮಾಡುತ್ತಿದ್ದಾರೆ. ಏನ್ಸಾರ್ 40 ಪರ್ಸೆಂಟ್ ಕಮೀಶನ್ ಆರೋಪವನ್ನು ಬಿಜೆಪಿ ಸರ್ಕಾರದ ವಿರುದ್ಧ ಮಾಡಿ ಆಧಿಕಾರಕ್ಕೆ ಬಂದ ನೀವು ಸಹ ಅದೇ ದಾರಿಯಲ್ಲಿ ಸಾಗುತ್ತಿದ್ದೀರಾ ಅಂತ ಇವತ್ತು ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡುಕದೆ ಪ್ರತಿಕ್ರಿಯೆ ನೀಡಿದರು. ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಆರೋಪಗಳನ್ನು ತನಿಖೆ ಮಾಡಲು ನಿವೃತ್ತ ಹೈ ಕೋರ್ಟ್ ನ್ಯಾಯಾಧೀಶ ನಾಗಮೋಹನ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಕೆಂಪಣ್ಣನವರಾಗಲೀ ಬೇರೆ ಯಾರೇ ಗುತ್ತಿಗೆದಾರನಾಗಲೀ ಆಯೋಗಕ್ಕೆ ದೂರು ಸಲ್ಲಿಸಲು ಮುಕ್ತರಾಗಿದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ, ಅಧಿಕಾರಿಗಳು ಕಮೀಶನ್ ಡಿಮ್ಯಾಂಡ್ ಮಾಡಿದ್ದರೂ ಕೆಂಪಣ್ಣನವರು ಆಯೋಗಕ್ಕೆ ದೂರು ಸಲ್ಲಿಸಲು ಸ್ವತಂತ್ರರು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ