AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Polls: ಸರ್ಕಾರ ರಚಿಸುವ ಅವಕಾಶ ನೀಡಿದರೆ ಚಿಕಿತ್ಸೆಗಾಗಿ ಹಣ ವ್ಯಯಿಸದಂಥ ವ್ಯವಸ್ಥೆ ಜಾರಿಗೆ ತರುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

Assembly Polls: ಸರ್ಕಾರ ರಚಿಸುವ ಅವಕಾಶ ನೀಡಿದರೆ ಚಿಕಿತ್ಸೆಗಾಗಿ ಹಣ ವ್ಯಯಿಸದಂಥ ವ್ಯವಸ್ಥೆ ಜಾರಿಗೆ ತರುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 28, 2023 | 3:11 PM

Share

ಕುಮಾರಸ್ವಾಮಿಯವರು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿಂದು ಅನಾರೋಗ್ಯದ ನಿಮಿತ್ತ ಧನಸಹಾಯ ಕೇಳಿದ ವ್ಯಕ್ತಿಯೊಬ್ಬನಿಗೆ ಸಹಾಯ ಮಾಡುವ ಭರವಸೆಯನ್ನು ಸಾರ್ವಜನಿಕವಾಗಿ ನೀಡಿದರು.

ಬೆಂಗಳೂರು: ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆಯ ಮುಂದಾಳತ್ವವಹಿಸಿರುವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಮಂಗಳವಾರ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಓಡಾಡುವಾಗ ಅನಾರೋಗ್ಯದ ನಿಮಿತ್ತ ಧನಸಹಾಯ ಕೇಳಿದ ವ್ಯಕ್ತಿಯೊಬ್ಬನಿಗೆ ಸಹಾಯ ಮಾಡುವ ಭರವಸೆಯನ್ನು ಸಾರ್ವಜನಿಕವಾಗಿ ನೀಡಿದರು. ಆದರೆ ಅದಕ್ಕೂ ಮೊದಲು ಅವರು ತಮಗೆ ಪ್ರತಿದಿನ ಚಿಕಿತ್ಸೆಗಾಗಿ ನೆರವು ಕೋರಿ ಪತ್ರ ಬರೆಯತ್ತಾರೆ, ಆದರೆ ತಾನೊಬ್ಬ ರೈತ ಮತ್ತು ತೋಟವೊಂದನನ್ನು ಬಿಟ್ಟರೆ ಬೇರೇನೂ ಇಲ್ಲ, ಹಾಗಾಗಿ ಎಲ್ಲರಿಗೆ ಸಹಾಯ (monetary help) ಮಾಡುವುದು ನನ್ನಿಂದಾಗದು ಎಂದು ಹೇಳಿದರು. ಒಂದು ಪಕ್ಷ ಮತದಾರರು ತಮಗೆ ಸರ್ಕಾರ ರಚಿಸುವ ಅವಕಾಶ ನೀಡಿದರೆ, ಚಿಕಿತ್ಸೆಗಾಗಿ ಒಂದೇ ರೂಪಾಯಿ ಸಹ ಖರ್ಚು ಮಾಡದಂಥ ವ್ಯವಸ್ಥೆ (cashless treatment) ಜಾರಿಗೆ ತರುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ