ಅನುದಾನ ವಾಪಸ್ಸು ಬರದಿದ್ದರೆ ಈ ಬಾರಿ ಪ್ರತಿಭಟನೆ ಮಾಡಲ್ಲ ಮತ್ತು ಕೈಕಾಲು ಸಹ ಹಿಡಿಯಲ್ಲ: ಮುನಿರತ್ನ, ಬಿಜೆಪಿ ಶಾಸಕ

ಮುನಿರತ್ನರನ್ನು ತಮ್ಮ ನಿವಾಸಕ್ಕೆ ಕರೆಸಿದ್ದ ಶಿವಕುಮಾರ್ ಕಾಮಗಾರಿಗಳ ಪಟ್ಟಿ ನೀಡುವಂತೆ ಹೇಳಿ ಅನುದಾನವನ್ನು ರೀಡೈರೆಕ್ಟ್ ಮಾಡುವ ಆಶ್ವಾಸನೆ ನೀಡಿದ್ದರು. ಆದರೆ, ಮುನಿರತ್ನ ಅವರ ಮನವಿ ಇನ್ನೂ ಪುರಸ್ಕೃತಗೊಂಡಿಲ್ಲ. ಪಟ್ಟಿಯನ್ನು ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಅವರಿಗೆ ನೀಡಿದ್ದು ಅನುದಾನಕ್ಕಾಗಿ ಕಾಯುತ್ತಿರುವೆ ಎಂದು ಮುನಿರತ್ನ ಹೇಳಿದರು.

ಅನುದಾನ ವಾಪಸ್ಸು ಬರದಿದ್ದರೆ ಈ ಬಾರಿ ಪ್ರತಿಭಟನೆ ಮಾಡಲ್ಲ ಮತ್ತು ಕೈಕಾಲು ಸಹ ಹಿಡಿಯಲ್ಲ: ಮುನಿರತ್ನ, ಬಿಜೆಪಿ ಶಾಸಕ
|

Updated on: Oct 19, 2023 | 1:17 PM

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು (Munirathna Naidu) ತಮ್ಮ ಕಚೇರಿಯಲ್ಲಿ ಇವತ್ತು ಮತ್ತೊಂದು ಸುದ್ದಿಗೋಷ್ಟಿ ನಡೆಸಿ ತಮ್ಮ ಕ್ಷೇತ್ರದ ಅಬಿವೃದ್ಧಿ ಕಾರ್ಯಗಳಿಗೆ ಹಿಂದಿನ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ರೂ.126 ಕೋಟಿ ಸಿಗಲೇಬೇಕು ಅಂತ ಹೇಳಿದರು. ಕಳೆದ ವಾರವೂ ಅವರು ಒಂದು ಸುದ್ದಿಗೋಷ್ಟಿ ನಡೆಸಿ, ಮರುದಿನ ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆಯ ಮುಂದೆ ನಿರಶನ ನಡೆಸಿದ ಬಳಿಕ ಅರಮನೆ ಮೈದಾನದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾಗಿ ಕಾಲು ಮುಟ್ಟಿ ನಮಸ್ಕರಿಸಿ ಹಿಂಪಡೆದಿರುವ ಅನುದಾನವನ್ನು ವಾಪಸ್ಸು ನೀಡಬೇಕೆಂದು ಮನವಿ ಮಾಡಿದ್ದರು. ಮುನಿರತ್ನರನ್ನು ತಮ್ಮ ನಿವಾಸಕ್ಕೆ ಕರೆಸಿದ್ದ ಶಿವಕುಮಾರ್ ಕಾಮಗಾರಿಗಳ ಪಟ್ಟಿ ನೀಡುವಂತೆ ಹೇಳಿ ಅನುದಾನವನ್ನು ರೀಡೈರೆಕ್ಟ್ (redirect) ಮಾಡುವ ಆಶ್ವಾಸನೆ ನೀಡಿದ್ದರು. ಆದರೆ, ಮುನಿರತ್ನ ಅವರ ಮನವಿ ಇನ್ನೂ ಪುರಸ್ಕೃತಗೊಂಡಿಲ್ಲ. ಹಾಗಾಗೇ, ಇಂದು ಸುದ್ದಿಗೋಷ್ಟಿ ನಡೆಸಿದ ಅವರು, ಪಟ್ಟಿಯನ್ನು ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಅವರಿಗೆ ನೀಡಿದ್ದು ಅನುದಾನಕ್ಕಾಗಿ ಕಾಯುತ್ತಿರುವೆ ಎಂದರು. ಅನುದಾನ ವಾಪಸ್ಸು ಬಾರದಿದ್ದರೆ ಮುಂದಿನ ಕ್ರಮ ಏನು ಅಂತ ಅವರನ್ನು ಕೇಳಿದರೆ, ನೋಡೋಣ, ಆದರೆ ಈ ಬಾರಿ ಪ್ರತಿಭಟನೆ ಅಥವಾ ಕಾಲುಹಿಡಿಯುದನ್ನಂತೂ ಮಾಡಲ್ಲ ಎಂದು ಖಡಾಖಂಡಿತವಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು