ದರ್ಶನ್​ರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಪರಿಸ್ಥಿತಿ ಇದ್ದರೆ ಖಂಡಿತ ಮಾಡ್ತೀವಿ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Aug 27, 2024 | 3:53 PM

ಖರ್ಗೆ ಕುಟುಂಬದ ಟ್ರಸ್ಟ್​ ಜಮೀನು ಅಲಾಟ್ಮೆಂಟ್ ಗೆ ಅರ್ಹವಾಗಿದ್ದ ಕಾರಣ ಕಾನೂನು ಪ್ರಕಾರ ಅವರಿಗೆ ಜಮೀನು ನೀಡಲಾಗಿದೆ, ಇದರಲ್ಲಿ ಕಾನೂನುಬಾಹಿರ ಏನೂ ಇಲ್ಲ, ಹಿಂದಿನ ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಯಾಕೆ ಜಮೀನು ನೀಡಿದ್ದು? ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿಎಂ ಸಿದ್ದರಾಮಯ್ಯ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತನಿಖೆ ಮಾಡಲು ಆದೇಶಿಸಲಾಗಿದೆ, ತಪ್ಪಿತಸ್ಥ 9 ಅಧಿಕಾರಿಗಳನ್ನು ಟ್ರಾನ್ಸ್ ಫರ್ ಮಾಡಲಾಗಿದ್ದು ತನಿಖಾ ವರದಿಯಲ್ಲಿ ದರ್ಶನ್ ರನ್ನು ಬೇರೆ ಜೈಲಿಗೆ ವರ್ಗಾಯಿಸುವ ಶಿಫಾರಸ್ಸು ಮಾಡಿದರೆ ಅದರಂತೆ ಮಾಡತ್ತೇವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆರಳಿಗೆ ಚುಚ್ಚಿದ ಒಂದು ಗುಂಡುಸೂಜಿಯ ಕತೆ!

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.