ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಹೆಸರಿಟ್ಟರೆ ನಮ್ಮದೇನೂ ಅಭ್ಯಂತರವಿಲ್ಲ: ಡಿಕೆ ಶಿವಕುಮಾರ್

|

Updated on: Feb 09, 2023 | 11:47 AM

ಲಭ್ಯವಾಗಿರುವ ಮಾಹಿತಿಯ ಪ್ರಕಾರ ಆ ರೈತರಲ್ಲಿ ಹಲವಾರು ಜನರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಅಥವಾ ಸ್ವಲ್ಪ ಮಾತ್ರ ಸಿಕ್ಕಿದೆ. ರಾಜ್ಯ ಸರ್ಕಾರ ಆದಷ್ಟು ಬೇಗ ರೈತರಿಗೆ ಪರಿಹಾರ ಧನ ನೀಡಬೇಕು ಎಂದು ಶಿವಕುಮಾರ್ ಹೇಳಿದರು.

ಶಿವಮೊಗ್ಗ: ದಕ್ಷಿಣ ಕರ್ನಾಟಕದಲ್ಲಿ ಪ್ರಜಾಧ್ವನಿ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಶಿವಮೊಗ್ಗದಲ್ಲಿ ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪನವರ (BS Yediyurappa) ಹೆಸರಿಟ್ಟರೆ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದರು. ಆದರೆ, ಏರ್ಪೋರ್ಟ್ ನಿರ್ಮಾಣಕ್ಕಾಗಿ ಅನೇಕ ರೈತರ ಜಮೀನುಗಳನ್ನು ಸ್ವಾಧೀನ (acquisition) ಮಾಡಿಕೊಳ್ಳಲಾಗಿದೆ. ಆದರೆ, ಲಭ್ಯವಾಗಿರುವ ಮಾಹಿತಿಯ ಪ್ರಕಾರ ಆ ರೈತರಲ್ಲಿ ಹಲವಾರು ಜನರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಅಥವಾ ಸ್ವಲ್ಪ ಮಾತ್ರ ಸಿಕ್ಕಿದೆ. ರಾಜ್ಯ ಸರ್ಕಾರ ಆದಷ್ಟು ಬೇಗ ರೈತರಿಗೆ ಪರಿಹಾರ ಧನ ನೀಡಬೇಕು ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on