ಸಿದ್ದರಾಮಯ್ಯ ಇನ್ನೊಮ್ಮೆ ವಿಶ್ವಗುರು ಪ್ರಧಾನಿ ನರೇಂದ್ರ ಮೋದಿಯವರನ್ನು ನರಹಂತಕ ಅಂತ ಹೇಳಿದರೆ ನಾಲಿಗೆ ಸೀಳಿಬಿಡ್ತೀನಿ! ಕೆಎಸ್ ಈಶ್ವರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Mar 11, 2023 | 11:46 AM

ವಿಜಯ ಸಂಕಲ್ಪ ಯಾತ್ರೆಯ ಭಾಗವಾಗಿ ಮಡಿಕೇರಿಯಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತಾಡಿದ ಈಶ್ವರಪ್ಪ ಪುನಃ ತನ್ನ ಬದ್ಧ ರಾಜಕೀಯ ವೈರಿ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಮತ್ತು ಬಿಜೆಪಿಯ ಹಿರಿಯ ನಾಯಕ ಮತ್ತು ಶಾಸಕ ಕೆಎಸ್ ಈಶ್ವರಪ್ಪ (KS Eshwarappa) ನಡುವೆ ದಶಕಗಳಿಂದ ಮಾತಿನ ಜಗಳ ನಡೆದುಕೊಂಡು ಬಂದಿದೆ ಮಾರಾಯ್ರೇ. ಅದು ಸದನದಲ್ಲೂ ನಡೆಯುತ್ತದೆ ಮತ್ತು ಹೊರಗೂ ನಡೆಯತ್ತದೆ. ವಿಜಯ ಸಂಕಲ್ಪ ಯಾತ್ರೆಯ ಭಾಗವಾಗಿ ಮಡಿಕೇರಿಯಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತಾಡಿದ ಈಶ್ವರಪ್ಪ ಪುನಃ ತನ್ನ ಬದ್ಧ ರಾಜಕೀಯ ವೈರಿ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಸಭೆಯೊಂದರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ನರಹಂತಕ ಅಂತ ಹೇಳಿದ್ದು ಈಶ್ವರಪ್ಪರನ್ನು ವ್ಯಗ್ರರನ್ನಾಗಿಸಿದೆ. ‘ಸಿದ್ದರಾಮಯ್ಯ ಆ ಪದವನ್ನು ಪುನರಾವರ್ತಿಸಿದರೆ ನಾಲಿಗೆ ಸೀಳಿಬಿಡ್ತೀನಿ, ಹುಷಾರ್!’ ಎಂದು ಈಶ್ವರಪ್ಪ ಗುಡುಗಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.