ನೀರಿನ ದರಯೇರಿಕೆ; ಆಡಳಿತ ನಡೆಸಲಾಗಲ್ಲ ಅಂತ ಸಿದ್ದರಾಮಯ್ಯ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ: ನಿವಾಸಿಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Apr 10, 2025 | 11:27 AM

ಅಕ್ರಮ ನೀರಿನ ಸಂಪರ್ಕಗಳನ್ನು ರೆಗ್ಯುಲರೈಸ್ ಮಾಡಿ ದುರಸ್ತಿ ಕಾಣದೆ ಪೈಪ್​ಗಳು ಒಡೆದು ನೀರು ಪೋಲಾಗುತ್ತಿರುವುದನ್ನು ತಡೆದರೆ ನೀರಿನ ದರ ಏರಿಸುವ ಪ್ರಮೇಯವೇ ಉದ್ಭವಿಸುವುದಿಲ್ಲ. ಆದರೆ, ಸರ್ಕಾರ ತಾನು ಮಾಡಬೇಕಿರುವುದನ್ನು ಬಿಟ್ಟು ಅಮಾಯಕ ಜನರ ಮೇಲೆ ಬೆಲೆಯೇರಿಕೆಯ ಹೊರೆ ಹೇರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸುಮಾರು 50 ವಸ್ತುಗಳ ಬೆಲೆಯೇರಿಕೆ ಅಗಿದೆ ಅಂತ ನಿವಾಸಿಗಳು ಹೇಳುತ್ತಾರೆ.

ಬೆಂಗಳೂರು, ಏಪ್ರಿಲ್ 10: ಬಸ್ ಪ್ರಯಾಣ, ಹಾಲು, ವಿದ್ಯುತ್ ದರ ಏರಿಕೆಯ ನಂತರ ಇವತ್ತಿನಿಂದ ನೀರಿನ ದರವೂ ಏರಿಕೆ. ಬೆಂಗಳೂರು ನಿವಾಸಿಗಳು ಸಿದ್ದರಾಮಯ್ಯ ಸರ್ಕಾರವನ್ನು (Siddaramaiah Government) ನಿಷ್ಪ್ರಯೋಜಕ ಸರ್ಕಾರ ಎಂದು ತೆಗಳುತ್ತಿದ್ದಾರೆ. ನಮ್ಮ ಬೆಂಗಳೂರು ಪ್ರತಿನಿಧಿ ಹಲವು ಹಿರಿಯ ನಾಗರಿಕರೊಂದಿಗೆ ಮಾತಾಡಿದ್ದು ಅವರು ಬೇರೆ ಬೇರೆ ರೀತಿಯಲ್ಲಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಾಮಾನ್ಯ ಜನರಿಗೆ, ಮಧ್ಯಮ ವರ್ಗದ ಕುಟುಂಬಗಳಿಗೆ ಆಗಿರುವ ಪ್ರಯೋಜನವಾದರೂ ಏನು ಎಂದು ಅವರು ಪ್ರಶ್ನಿಸುತ್ತಾರೆ.

ಇದನ್ನೂ ಓದಿ:   ಗಗನಕ್ಕೇರಿದ ಕೊಬ್ಬರಿ ಎಣ್ಣೆ ದರ: ಲೀಟರ್​ಗೆ 300 ರೂಪಾಯಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.