Gadag; ಐದು ವರ್ಷದ ಅವಧಿಗೆ ನಾನೇ ಮುಖ್ಯಮಂತ್ರಿ ಅಂತ ಸಿದ್ದರಾಮಯ್ಯ ಹೇಳಿದ ದಿನವೇ ಈ ಸರ್ಕಾರ ಬಿದ್ದು ಹೋಗುತ್ತದೆ: ಕೆಎಸ್ ಈಶ್ವರಪ್ಪ

Updated on: Jun 23, 2023 | 6:13 PM

ಶಿವಕುಮಾರ್ ಅವರು ಸಿದ್ದರಾಮಯ್ಯ ಬೇಡ್ವೇ ಬೇಡ ಅಂತ ಹೇಳಿ ಬೇಕಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡಿ ಅಂತ ಯಾಕೆ ಹೇಳಿದರು ಅಂತ ಈಶ್ವರಪ್ಪ ಪ್ರಶ್ನಿಸಿದರು.

ಗದಗ: ಬಹಳ ದಿನಗಳ ಬಳಿಕ ಮಾಜಿ ಶಾಸಕ ಕೆಎಸ್ ಈಶ್ವರಪ್ಪ (KS Eshwarappa) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಚುನಾವಣೆಗೆ ಮೊದಲು ಸಿದ್ದರಾಮಯ್ಯರನ್ನು (Siddaramaiah) ಗುರಿಯಾಗಿಸಿ ಮಾತಾಡುತ್ತಿದ್ದ ಅವರು ಈಗಲೂ ಅದೇ ಕಾಯಕವನ್ನು ಮುಂದುವರಿಸಿದ್ದಾರೆ. ಕಾಂಗ್ರೆಸ್ ಪಕ್ಷ 135 ಸೀಟುಗಳನ್ನು ಗೆದ್ದರೂ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಹಲವಾರು ದಿನ ಬೇಕಾಯಿತು, ಡಿಕೆ ಶಿವಕುಮಾರ್ (DK Shivakumar) ಬಣದವರು ಸಿದ್ದರಾಮಯ್ಯ ಯಾಕೆ ಮುಖ್ಯಮಂತ್ರಿ ಆಗಬಾರದು ಅಂತ 15 ಅಂಶಗಳ ಪಟ್ಟಿ ತಯಾರಿಸಿ ಬಿಡುಗಡೆ ಮಾಡಿದರು. ಶಿವಕುಮಾರ್ ಅವರು ಸಿದ್ದರಾಮಯ್ಯ ಬೇಡ್ವೇ ಬೇಡ ಅಂತ ಹೇಳಿ ಬೇಕಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಡಿ ಅಂತ ಯಾಕೆ ಹೇಳಿದರು ಅಂತ ಈಶ್ವರಪ್ಪ ಪ್ರಶ್ನಿಸಿದರು. ತಾನು 5-ವರ್ಷ ಅವಧಿಗೆ ಮುಖ್ಯಮಂತ್ರಿ ತಾವೇ ಅಂತ ಸಿದ್ದರಾಮಯ್ಯ ಹೇಳುತ್ತಿಲ್ಲ, ಅವರು ಹಾಗೆ ಹೇಳಿದರೆ ಅದೇ ದಿನ ಈ ಸರ್ಕಾರ ಬಿದ್ದು ಹೋಗುತ್ತೆ ಎಂದು ಈಶ್ವರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More