ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; ಆರ್​ಜೆಡಿ ಎಂಎಲ್​ಸಿ ಸುನಿಲ್ ಸಿಂಗ್ ವಿವಾದ

Updated on: Nov 13, 2025 | 5:43 PM

ಭಾರತದಲ್ಲಿ ಕೂಡ "ಬಾಂಗ್ಲಾ, ನೇಪಾಳದಂತಹ ಹಿಂಸಾಚಾರ" ನಡೆಯಲಿದೆ ಎಂದು ಎಚ್ಚರಿಸಿದ ನಂತರ ಆರ್‌ಜೆಡಿ ನಾಯಕ ಸುನಿಲ್ ಸಿಂಗ್ ಅವರು ಪ್ರಮುಖ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದಾರೆ. ಅವರ ಹೇಳಿಕೆಗಳು ಬಿಜೆಪಿ ಮತ್ತು ಇತರ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, ಅವರು ಅಶಾಂತಿಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ

ಪಾಟ್ನಾ, ನವೆಂಬರ್ 13: 2025ರ ಬಿಹಾರ ವಿಧಾನಸಭಾ ಚುನಾವಣೆ (Bihar Assembly Elections) ಈಗಾಗಲೇ ನಡೆದಿದೆ. ಮತೆಣಿಕೆ ಮುಗಿದು ಫಲಿತಾಂಶ ಪ್ರಕಟವಾಗುವುದಷ್ಟೇ ಬಾಕಿಯಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಆರ್‌ಜೆಡಿಯ ಎಂಎಲ್‌ಸಿ ಸುನಿಲ್ ಸಿಂಗ್, “ಬಿಹಾರದ ಚುನಾವಣೆಯಲ್ಲಿ ವಂಚನೆ ನಡೆದರೆ, ಬಿಹಾರ ಮತ್ತೊಂದು ನೇಪಾಳ ಅಥವಾ ಬಾಂಗ್ಲಾದೇಶವಾಗಿ ಬದಲಾಗುತ್ತದೆ. ಸಾಮಾನ್ಯ ಜನರು ಜಾಗರೂಕರಾಗಿರುತ್ತಾರೆ. ನಾವು ಶೇ. 1ರಷ್ಟು ದುಷ್ಕೃತ್ಯವನ್ನು ಕೂಡ ಸಹಿಸುವುದಿಲ್ಲ. ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ನಾನು ಮನವಿ ಮಾಡುತ್ತೇನೆ. ಮತ ಎಣಿಕೆಯನ್ನು ನ್ಯಾಯಯುತವಾಗಿ ನಡೆಸಿ, ನಿಮ್ಮ ಕರ್ತವ್ಯಗಳನ್ನು ಸಮಗ್ರತೆಯಿಂದ ನಿರ್ವಹಿಸಿ” ಎಂದು ಹೇಳಿದ್ದಾರೆ.

ಭಾರತದಲ್ಲಿ ಕೂಡ “ಬಾಂಗ್ಲಾ, ನೇಪಾಳದಂತಹ ಹಿಂಸಾಚಾರ” ನಡೆಯಲಿದೆ ಎಂದು ಎಚ್ಚರಿಸಿದ ನಂತರ ಆರ್‌ಜೆಡಿ ನಾಯಕ ಸುನಿಲ್ ಸಿಂಗ್ ಅವರು ಪ್ರಮುಖ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದಾರೆ. ಅವರ ಹೇಳಿಕೆಗಳು ಬಿಜೆಪಿ ಮತ್ತು ಇತರ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, ಅವರು ಅಶಾಂತಿಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More