ಬಿಜೆಪಿ-ಜೆಡಿಎಸ್ ಮೈತ್ರಿ ವಿಧಾನಸಭಾ ಚುನಾವಣೆಗೂ ಅನ್ವಯಿಸುತ್ತದೆಯೇ? ಜಿಟಿ ದೇವೇಗೌಡ ಹೇಳೋದನ್ನು ಕೇಳಿದರೆ ಹೌದು!

ಅರುಣ್​ ಕುಮಾರ್​ ಬೆಳ್ಳಿ

Updated on: Sep 27, 2023 | 6:30 PM

ದೇವದುರ್ಗದ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಮೈತ್ರಿಯ ಬಗ್ಗೆ ಆಕ್ಷೇಪಣೆಗಳನ್ನು ಎತ್ತಿದ್ದರು. ಅವರನ್ನು ಕುರಿತು ಕೇಳಿದ ಪ್ರಶ್ನೆಗೆ ಗೌಡರು, ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕರೆಮ್ಮನವರೇ ಬಿಜೆಪಿ-ಜೆಡಿಎಸ್ ಮೈತ್ರಿಯ ಅಭ್ಯರ್ಥಿಯಾಗಿರುತ್ತಾರೆ. ಈ ಬಾರಿ ಅವರಿಗೆ ಮತ ನೀಡಿದವರು ಮುಂದಿನ ಬಾರಿಯೂ ನೀಡುತ್ತಾರೆ ಮತ್ತು ದೇವದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಈ ಬಾರಿ ಪಡೆದ ವೋಟುಗಳ ಶೇಕಡ 50ರಷ್ಟು ಮಾತ್ರ ಕರೆಮ್ಮನವರಿಗೆ ಸಿಕ್ಕರೂ ಸಾಕ, ಅವರು ಅನಾಯಸವಾಗಿ ಗೆಲ್ಲುತ್ತಾರೆ ಎಂದು ಹೇಳಿದರು.

ಕೊಪ್ಪಳ: ಜೆಡಿಎಸ್ ಪಕ್ಷದ ಹಿರಿಯ ನಾಯಕ ಜಿಟಿ ದೇವೇಗೌಡ (Gt Devegowda) ಹೇಳುವುದನ್ನು ಕೇಳಿದರೆ ರಾಜ್ಯದ ರಾಜಕೀಯ ಚಿತ್ರಣ (political scenario) ಸಂಪೂರ್ಣವಾಗಿ ಬದಲಾಗಲಿದೆ. ಮುಂಬರುವ ಲೋಕಸಭಾ (Lok Sabha polls) ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ  ನಡುವೆ ನೇರಾನೇರ ಹೋರಾಟ ನಡೆಯಲಿದೆ. ಕೊಪ್ಪಳದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಜಿಟಿಡಿ 2028ರ ವಿಧಾನಸಭಾ ಚುನಾವಣೆಯ ಚಿತ್ರಣವನ್ನೂ ಬಿಚ್ಚಿಟ್ಟರು. ದೇವದುರ್ಗದ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಮೈತ್ರಿಯ ಬಗ್ಗೆ ಆಕ್ಷೇಪಣೆಗಳನ್ನು ಎತ್ತಿದ್ದರು. ಅವರನ್ನು ಕುರಿತು ಕೇಳಿದ ಪ್ರಶ್ನೆಗೆ ಗೌಡರು, ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕರೆಮ್ಮನವರೇ ಬಿಜೆಪಿ-ಜೆಡಿಎಸ್ ಮೈತ್ರಿಯ ಅಭ್ಯರ್ಥಿಯಾಗಿರುತ್ತಾರೆ. ಈ ಬಾರಿ ಅವರಿಗೆ ಮತ ನೀಡಿದವರು ಮುಂದಿನ ಬಾರಿಯೂ ನೀಡುತ್ತಾರೆ ಮತ್ತು ದೇವದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಈ ಬಾರಿ ಪಡೆದ ವೋಟುಗಳ ಶೇಕಡ 50ರಷ್ಟು ಮಾತ್ರ ಕರೆಮ್ಮನವರಿಗೆ ಸಿಕ್ಕರೂ ಸಾಕ, ಅವರು ಅನಾಯಸವಾಗಿ ಗೆಲ್ಲುತ್ತಾರೆ ಎಂದು ಹೇಳಿದರು. ಮೈತ್ರಿಯ ಬಗ್ಗೆ ಕರೆಮ್ಮನವರಿಗೆ ವಿಶ್ವಾಸ ಮೂಡಲು ಗೌಡರು ಇದನ್ನು ಹೇಳಿರಬಹುದಾದ ಅಂಶವನ್ನು ಅಲ್ಲಗಳೆಯಲಾಗದು. ಬಿಜೆಪಿ ಸಂಸದ ಇದ್ದಲ್ಲಿ ಜೆಡಿಎಸ್ ಶಾಸಕ, ಜೆಡಿಎಸ್ ಸಂಸದ ಇದ್ದೆಡೆ ಬಿಜೆಪಿ ಶಾಸಕ ಎಂದು ದೇವೇಗೌಡ ಹೇಳಿದರು. ಎಲ್ಲ ಜಿಟಿ ದೇವೇಗೌಡ ಅಂದುಕೊಂಡಂತೆ ನಡೆದರೆ ರಾಜ್ಯದಲ್ಲಿ ಕಾಂಗ್ರೆಸ್ ಗೆ ಉಳಿಗಾಲವಿಲ್ಲ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.