ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೇಳಲಿರುವ ಸಿದ್ದರಾಮಯ್ಯ ಇಷ್ಟು ದಿನ ಯಾಕೆ ಸುಮ್ಮನಿದ್ದರು? ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 09, 2024 | 6:52 PM

ನವೆಂಬರ್ 14 ರ ನಂತರ ಬಿಜೆಪಿಯ ನಿಷ್ಠಾವಂತ ನಾಯಕರು ಒಂದುಗೂಡಿ ಸರ್ಕಾರದ ವಿರುದ್ಧ ಬೀದರ್​ನಿಂದ ಪ್ರತಿಭಟನೆ ಆರಂಭಿಸಲಿದ್ದೇವೆ, ತಮ್ಮ ಹೋರಾಟ ತೀವ್ರಗೊಳ್ಳಲಿದೆ, ಸರ್ಕಾರದ ವಾಲ್ಮೀಕಿ ಹಗರಣ, ಮುಡಾ ಹಗರಣ, ವಕ್ಫ್ ಭೂವಿವಾದ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಹಾವೇರಿ: ಕೋವಿಡ್ ಸಮಯದಲ್ಲಿ ಪಿಪಿಈ ಕಿಟ್ ಖರೀದಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಅಯೋಗವು ಶ್ರೀರಾಮುಲು ಮತ್ತು ಯಡಿಯೂರಪ್ಪ ಅವರು ತಪ್ಪಿತಸ್ಥರು ಅಂತ ವರದಿಯಲ್ಲಿ ಹೇಳಿದ್ದರೆ, ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಕೋರಲು ಸಿದ್ದರಾಮಯ್ಯ ಇಷ್ಟು ದಿನ ಸುಮ್ಮನಿದ್ದಿದ್ದು ಯಾಕೆ? ಯಡಿಯೂರಪ್ಪ ಜೊತೆ ಹೊಂದಾಣಿಕೆಯಿತ್ತೇ? ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದರು. ತಮ್ಮನ್ನು ಟೀಕಿಸುವವರ ವಿರುದ್ಧ ಮಾತ್ರ ಸಿದ್ದರಾಮಯ್ಯ ಸರ್ಕಾರ ಎಫ್ಐಅರ್ ಗಳನ್ನು ದಾಖಲಿಸುತ್ತದೆ, ಇದೇ ಕಾರಣಕ್ಕೆ, ಸಿಟಿ ರವಿ, ಪ್ರತಾಪ್ ಸಿಂಹ, ತೇಜಸ್ವೀ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಮತ್ತು ತನ್ನ ವಿರುದ್ಧ ಎಫ್​ಐಆರ್​​ಗಳನ್ನು ದಾಖಲಿಸಲಾಗಿದೆ ಎಂದು ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಶಿಗ್ಗಾವಿಯಲ್ಲಿ ಕಾಂಗ್ರೆಸ್ ಮುಖಂಡರು ಮಾತ್ರ ಬೊಮ್ಮಾಯಿ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ: ಬಸನಗೌಡ ಯತ್ನಾಳ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.