ಪೊಲೀಸ್ ಅಧಿಕಾರಿ ವಿರುದ್ಧ ಸಿಎಂ ಸಾರ್ವಜನಿಕವಾಗಿ ರೇಗಿದ್ದನ್ನು ಕೇಳಿದರೆ ಐಜಿಪಿ ರಾಠೋಡ್ ಉತ್ತರಿಸಲಿಲ್ಲ!
ಮಹಿಳೆಯರು ಪ್ರತಿಭಟನೆ ಮಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಯನ್ನು ವೇದಿಕೆ ಮೇಲೆ ಕರೆದು ರೇಗಿದ ಬಗ್ಗೆ ಕೇಳಿದ ಪ್ರಶ್ನೆಗೆ ಚೇತನ್ ಸಿಂಗ್ ರಾಠೋಡ್, ಆ ವಿಷಯದ ಬಗ್ಗೆ ನೋ ಕಾಮೆಂಟ್ಸ್, ಮಹಿಳೆಯರು ಅರೆಸ್ಟ್ ಆಗಿರುವ ಬಗ್ಗೆ ಕೇಳಲು ನೀವು ಇಲ್ಲಿಗೆ ಬಂದಿರುವಿರಿ ಉತ್ತರ ನೀಡಿದ್ದೇನೆ, ಉಳಿದ ವಿಷಯಗಳ ಯಾವುದೆ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು.
ಬೆಳಗಾವಿ, ಏಪ್ರಿಲ್ 28: ನಗರದ ಸಿಪಿಎಡ್ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಬೆಲೆಯೇರಿಕೆ ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ಮಾಡುತ್ತಿದ್ದಾಗ ಕಪ್ಪು ಬಾವುಟ ಪ್ರದರ್ಶಿಸಿದ 6 ಮಹಿಳೆಯರನ್ನು ಬಂಧಿಸಿರುವ ಬಗ್ಗೆ ಉತ್ತರ ವಲಯದ ಐಜಿಪಿ ಚೇತನ್ ಸಿಂಗ್ ರಾಠೋಡ್ (Chetan Singh Rathore, IGP Northern Range) ವಿವರಣೆ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿದ್ದಾಗ ಕಪ್ಪುಬಾವುಟ ಪ್ರದರ್ಶಿಸಿದ ಮಹಿಳೆಯರನ್ನು ಬಂಧಿಸಲಾಗಿದೆ ಮತ್ತು ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ ಎಂದು ಹೇಳಿದ ಅವರು ಬಂಧಿತ ಮಹಿಳೆಯರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದರು.
ಇದನ್ನೂ ಓದಿ: ಭಾಷಣ ವೇಳೆ ಸಿದ್ದರಾಮಯ್ಯಗೆ ಕಪ್ಪು ಬಟ್ಟೆ ಪ್ರದರ್ಶನ: ಪೊಲೀಸ್ ಅಧಿಕಾರಿಯನ್ನು ವೇದಿಕೆ ಮೇಲೆ ಕರೆದು ಸಿಎಂ ತರಾಟೆ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ