ಟ್ರ್ಯಾಕ್ಟರ್ ಬಿದ್ದು 6 ಜನರ ದುರಂತ ಅಂತ್ಯ: ದುರ್ಘಟನೆ ಸಂಭವಿಸಿದ್ಹೇಗೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಐಜಿಪಿ
ಭೀಕರ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕನಿಷ್ಠ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಸಮೀಪದ ಟಿಬಿ ಡ್ಯಾಂ ಬಳಿಯ ಮುನಿರಾಬಾದ್ ನಲ್ಲಿ ಸಂಭವಿಸಿದೆ. ಹುಲಿಗಿ ಜಾತ್ರೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಕ್ಯಾಂಟರ್ ಗುದ್ದಿದೆ. ಪರಿಣಾಮ ಟ್ರ್ಯಾಕ್ಟರ್ ಸೇತುವೆ ಮೇಲಿಂದ ಕೆಳಕ್ಕೆ ಬಿದ್ದಿದೆ. ಇನ್ನು ಗಾಯಾಳುಗಳನ್ನ ಹೊಸಪೇಟೆ ಹಾಗೂ ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಐಜಿಪಿ ಹರ್ಷ ಅವರು ಭೇಟಿ ನೀಡಿ ಪರಿಶೀಲನೆ ಮಾಡಿ ಬಳಿಕ ದುರ್ಘಟನೆ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟರು.
ವಿಜಯನಗರ, (ಮೇ 15): ಭೀಕರ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕನಿಷ್ಠ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಸಮೀಪದ ಟಿಬಿ ಡ್ಯಾಂ ಬಳಿಯ ಮುನಿರಾಬಾದ್ ನಲ್ಲಿ ಸಂಭವಿಸಿದೆ. ಹುಲಿಗಿ ಜಾತ್ರೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಕ್ಯಾಂಟರ್ ಗುದ್ದಿದೆ. ಪರಿಣಾಮ ಟ್ರ್ಯಾಕ್ಟರ್ ಸೇತುವೆ ಮೇಲಿಂದ ಕೆಳಕ್ಕೆ ಬಿದ್ದಿದೆ. ಇನ್ನು ಗಾಯಾಳುಗಳನ್ನ ಹೊಸಪೇಟೆ ಹಾಗೂ ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಐಜಿಪಿ ಹರ್ಷ ಅವರು ಭೇಟಿ ನೀಡಿ ಪರಿಶೀಲನೆ ಮಾಡಿ ಬಳಿಕ ದುರ್ಘಟನೆ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟರು.
ಇದನ್ನೂ ಓದಿ: ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 6 ಮಂದಿ ದಾರುಣ ಸಾವು, ಹಲವರ ಸ್ಥಿತಿ ಗಂಭೀರ
Follow Us


