Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಗಲಕೋಟೆ ನಗರದ ಬಸ್​ ನಿಲ್ದಾಣದಲ್ಲಿ ಸಿಮೆಂಟ್​ ಚೀಲದಲ್ಲಿ ಮಹಿಳೆ ಗೋಮಾಂಸ ಸಾಗಿಸುತ್ತಿದ್ದರು. ಮಹಿಳೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on:Apr 05, 2025 | 2:37 PM

ಬಾಗಲಕೋಟೆ, ಏಪ್ರಿಲ್​ 05: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬಸ್​​ನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ಬೇಪಾರಿ ಎಂಬುವರನ್ನು ಹಿಂದೂ ಸಂಘಟನೆ (Hindu Activist) ಕಾರ್ಯಕರ್ತರು ಹಿಡಿದು ನವನಗರದ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಗಲಕೋಟೆ ನಗರದ ಬಸ್​ ನಿಲ್ದಾಣದಲ್ಲಿ ಸಿಮೆಂಟ್​ ಚೀಲದಲ್ಲಿ ಗೋಮಾಂಸ ತುಂಬಿಕೊಂಡು ಬಸ್​ ಏರಿದ್ದ ಶಕೀರಾರನ್ನು ಚಾಲಕ ಕೆಳಗೆ ಇಳಿಸಿದ್ದಾರೆ. ಬಳಿಕ, ಬಸ್​ ನಿರ್ವಾಹಕ ಟಂಟಂ ವಾಹನದಲ್ಲಿ ಗೋಮಾಂಸ ಸಾಗಿಸಲು ಯತ್ನಿಸುತ್ತಿದ್ದರು. ಈ ವಿಚಾರ ತಿಳಿದು ಬಸ್​ ಚಾಲಕ ಶಕೀಲಾರನ್ನು ಬಸ್​ನಿಂದ ಕೆಳಗೆ ಇಳಿಸಿದ್ದಾರೆ. ನಂತರ, ಹಿಂದೂ ಸಂಘಟನೆ ಕಾರ್ಯಕರ್ತರು ಶಕೀರಾರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Published On - 2:35 pm, Sat, 5 April 25