AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ, ಆರೋಪಿ ವಶಕ್ಕೆ

ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ, ಆರೋಪಿ ವಶಕ್ಕೆ

ಬಿ ಮೂರ್ತಿ, ನೆಲಮಂಗಲ
| Edited By: |

Updated on: Dec 23, 2024 | 11:10 AM

Share

ನೆಲಮಂಗಲದ ಮಾದಾವರದಲ್ಲಿರುವ ವಿನಾಯಕ ಎಂಆರ್​​ಪಿ ಬಾರ್​ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಬೆಳಗ್ಗೆಯೇ ಬಾರ್ ತೆರೆದು ಎಂಆರ್​​ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು. ಟಿವಿ9 ವರದಿಯ ನಂತರ ಪೊಲೀಸರು ದಾಳಿ ನಡೆಸಿ, ಸಿಬ್ಬಂದಿಯನ್ನು ಬಂಧಿಸಿ, ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ನೆಲಮಂಗಲ, ಡಿಸೆಂಬರ್​ 12: ಬೆಂಗಳೂರು ಉತ್ತರ ತಾಲೂಕಿನ ಮಾದಾವರ ಬಳಿಯ ಉದ್ಯಮಿ ಚಂದ್ರಪ್ಪ ಎಂಬುವರಿಗೆ ಸೇರಿದ ವಿನಾಯಕ ಎಮ್​ಆರ್​ಪಿ ಬಾರ್​ ಅನ್ನು ನಿಯಮ ಮೀರಿ ಬೆಳ್ಳಂ ಬೆಳಗ್ಗೆ ತೆರೆಯಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಬಾರ್​ ಇದೆ. ದಿನನಿತ್ಯ ನಿಯಮ ಮೀರಿ ಬೆಳಗ್ಗೆ ಬಾರ್​ ತೆರದು, ಮದ್ಯ ಮಾರಾಟ ಮಾಡಲಾಗುತ್ತಿತ್ತು. ಅಲ್ಲದೇ ಎಮ್​ಆರ್​​ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಟಿವಿ9 ವರದಿ ಮಾಡುತ್ತಿದ್ದಂತೆ ಎಚ್ಚೆತ್ತ ಮಾದನಾಯಕನಹಳ್ಳಿ ಪೊಲೀಸರು ದಾಳಿ ಮಾಡಿದರು. ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ಸಿಬ್ಬಂದಿ ಅನಿಲ್​ನನ್ನು ವಶಕ್ಕೆ ಪಡೆದಿದ್ದಾರೆ. ಸಾವಿರಾರು ರೂಪಾಯಿ ಬೆಲೆಬಾಳುವ ಮದ್ಯದ ಬಾಕ್ಸ್​ ಜಪ್ತಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More