ರಾಯಚೂರಿನಲ್ಲಿ ಮಧ್ಯರಾತ್ರಿ ಜೆಸಿಬಿ ಘರ್ಜನೆ: ಸಿಎ ಸೈಟ್ನಲ್ಲಿ ನಿರ್ಮಿಸಿದ್ದ ಶಿವ, ಗಣೇಶನ ಗುಡಿ ತೆರವು
ರಾಯಚೂರು ನಗರದಲ್ಲಿ ರಾತ್ರೋರಾತ್ರಿ ಬುಲ್ಡೋಜರ್ಗಳು ಸದ್ದು ಮಾಡಿವೆ. ರಾಯಚೂರಿನ ಸಂತೋಷ ನಗರದ ಸಿಎ ನಿವೇಶನದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ ಆರೋಪದಲ್ಲಿ 2 ದೇಗುಲಗಳನ್ನು ಧ್ವಂಸ ಮಾಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
ರಾಯಚೂರು, ನವೆಂಬರ್ 20: ರಾಯಚೂರು ನಗರದ ಸಂತೋಷ ನಗರದಲ್ಲಿ ಅಕ್ರಮವಾಗಿ ಸಿಎ ಸೈಟ್ನಲ್ಲಿ ನಿರ್ಮಿಸಿದ್ದ ಶಿವ ಮತ್ತು ಗಣೇಶನ ಗುಡಿಗಳನ್ನು ಮಂಗಳವಾರ ರಾತ್ರಿ ತೆರವು ಮಾಡಲಾಗಿದೆ. ರಾಯಚೂರು ಎಸಿ ಗಜಾನನ ಬಾಳೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು, ಜೆಸಿಬಿಗಳ ಮೂಲಕ ಗುಡಿಗಳನ್ನು ಧ್ವಂಸಗೊಳಿಸಲಾಗಿದೆ. ಮನೆ ಕಟ್ಟುವ ವೇಳೆ ಸಿಮೆಂಟ್ ಹಾಗೂ ಇತರೆ ಸಾಮಾಗ್ರಿಗಳು ಇಡಲು ಕಟ್ಟಲಾಗಿದ್ದ ಶೆಡ್ ಅನ್ನೇ ಗುಡಿ ಮಾಡಿಕೊಂಡು ಕೆಲ ಸ್ಥಳೀಯರು ಪೂಜೆ ಸಲ್ಲಿಸುತ್ತಿದ್ದರು. 2022ಜೂನ್ 1ರಂದು ಪ್ರೌಢಶಾಲೆ ಕಟ್ಟಡಕ್ಕೆ ಜಾಗ ಮಂಜೂರಾಗಿತ್ತು. ಜಾಗ ಮಂಜೂರು ಆದ ಬಳಿಕ ನಾಲ್ಕು ಕೊಠಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿತ್ತು. ಶಾಲೆ ಕಟ್ಟಡಕ್ಕೆ ಅನುದಾನ ಬಿಡುಗಡೆ ಆಗಿದ್ದರೂ ಸ್ಥಳೀಯರಿಂದ ಗುಡಿಗಳ ತೆರವಿಗೆ ವಿರೋಧ ವ್ಯಕ್ತವಾಗಿದೆ. ಸ್ಥಳೀಯರ ವಿರೋಧ ನಡುವೆಯೂ ಪೊಲೀಸ್ ಭದ್ರತೆಯಲ್ಲಿ ಗುಡಿಗಳ ತೆರವು ಕಾರ್ಯ ನಡೆದಿದೆ. ನಗರಸಭೆ ಪೌರಾಯುಕ್ತ, ಹೆಚ್ಚುವರಿ ಎಸ್ಪಿ ಶಿವಕುಮಾರ್ ಮತ್ತು ಹರೀಶ್ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಪೊಲೀಸರ ಭದ್ರತೆಯಲ್ಲಿ ಗುಡಿಗಳನ್ನು ತೆರವು ಮಾಡಲಾಯಿತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ

ಸ್ಪಿನ್ ಲೆಜೆಂಡ್ ಆರ್. ಅಶ್ವಿನ್ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
