ರಾಯಚೂರಿನಲ್ಲಿ ಮಧ್ಯರಾತ್ರಿ ಜೆಸಿಬಿ ಘರ್ಜನೆ: ಸಿಎ ಸೈಟ್​ನಲ್ಲಿ ನಿರ್ಮಿಸಿದ್ದ ಶಿವ, ಗಣೇಶನ ಗುಡಿ ತೆರವು

Edited By:

Updated on: Nov 20, 2024 | 10:25 AM

ರಾಯಚೂರು ನಗರದಲ್ಲಿ ರಾತ್ರೋರಾತ್ರಿ ಬುಲ್ಡೋಜರ್​ಗಳು ಸದ್ದು ಮಾಡಿವೆ. ರಾಯಚೂರಿನ ಸಂತೋಷ ನಗರದ ಸಿಎ ನಿವೇಶನದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ ಆರೋಪದಲ್ಲಿ 2 ದೇಗುಲಗಳನ್ನು ಧ್ವಂಸ ಮಾಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ರಾಯಚೂರು, ನವೆಂಬರ್ 20: ರಾಯಚೂರು ನಗರದ ಸಂತೋಷ ನಗರದಲ್ಲಿ ಅಕ್ರಮವಾಗಿ ಸಿಎ ಸೈಟ್​​ನಲ್ಲಿ ನಿರ್ಮಿಸಿದ್ದ ಶಿವ ಮತ್ತು ಗಣೇಶನ ಗುಡಿಗಳನ್ನು ಮಂಗಳವಾರ ರಾತ್ರಿ ತೆರವು ಮಾಡಲಾಗಿದೆ. ರಾಯಚೂರು ಎಸಿ ಗಜಾನನ ಬಾಳೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು, ಜೆಸಿಬಿಗಳ ಮೂಲಕ ಗುಡಿಗಳನ್ನು ಧ್ವಂಸಗೊಳಿಸಲಾಗಿದೆ. ಮನೆ ಕಟ್ಟುವ ವೇಳೆ ಸಿಮೆಂಟ್ ಹಾಗೂ ಇತರೆ ಸಾಮಾಗ್ರಿಗಳು ಇಡಲು ಕಟ್ಟಲಾಗಿದ್ದ ಶೆಡ್ ಅನ್ನೇ ಗುಡಿ ಮಾಡಿಕೊಂಡು ಕೆಲ ಸ್ಥಳೀಯರು ಪೂಜೆ ಸಲ್ಲಿಸುತ್ತಿದ್ದರು. 2022ಜೂನ್ 1ರಂದು ಪ್ರೌಢಶಾಲೆ ಕಟ್ಟಡಕ್ಕೆ ಜಾಗ ಮಂಜೂರಾಗಿತ್ತು. ಜಾಗ ಮಂಜೂರು ಆದ ಬಳಿಕ ನಾಲ್ಕು ಕೊಠಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿತ್ತು. ಶಾಲೆ ಕಟ್ಟಡಕ್ಕೆ ಅನುದಾನ ಬಿಡುಗಡೆ ಆಗಿದ್ದರೂ ಸ್ಥಳೀಯರಿಂದ ಗುಡಿಗಳ ತೆರವಿಗೆ ವಿರೋಧ ವ್ಯಕ್ತವಾಗಿದೆ. ಸ್ಥಳೀಯರ ವಿರೋಧ ನಡುವೆಯೂ ‌ಪೊಲೀಸ್ ಭದ್ರತೆಯಲ್ಲಿ ಗುಡಿಗಳ ತೆರವು ಕಾರ್ಯ ನಡೆದಿದೆ. ನಗರಸಭೆ ಪೌರಾಯುಕ್ತ, ಹೆಚ್ಚುವರಿ ಎಸ್​​​ಪಿ ಶಿವಕುಮಾರ್ ಮತ್ತು ಹರೀಶ್ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಪೊಲೀಸರ ಭದ್ರತೆಯಲ್ಲಿ ಗುಡಿಗಳನ್ನು ತೆರವು ಮಾಡಲಾಯಿತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Nov 20, 2024 10:20 AM
Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More