ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ: ಏನಿದು ಸಿದ್ದು ಮಾರ್ಮಿಕ ಮಾತು

Updated on: Aug 15, 2026 | 2:49 PM

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯನವರು ಸೈಲೆಂಟ್​​​​​​​ ಆಗಿದ್ದಾರೆ. ಬಹಿರಂವಾಗಿ ಯಾವುದೇ ಹೇಳಿಕೆಗಳನ್ನು ನೀಡದೇ ಸೈಲೆಂಟ್ ಮೂಡ್​​​ಗೆ ಜಾರಿದ್ದಾರೆ. ಇಂದು (ಆಗಸ್ಟ್​ 15) ಮಾಧ್ಯಮದವರು ಸಿದ್ದರಾಮಯ್ಯನವರನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಆದ್ರೆ, ಸಿದ್ದರಾಂಯ್ಯ ಮಾತ್ರ, ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ‌. ನಾನು ಹೆಚ್ಚು ಮಾತಾಡುತ್ತಿಲ್ಲ ಅಷ್ಟೇ . ನಾನು ಮುಖ್ಯಮಂತ್ರಿ ಅಲ್ಲ, ಹಾಗಾಗಿ ಜವಾಬ್ದಾರಿ ಇಲ್ಲ. ನಿನ್ನೆ ಅಧಿವೇಶನದಲ್ಲಿ ಭಾಗಿ ಆಗಿದ್ದೇನೆ. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಎಂದಿದ್ದಾರೆ.

ಬೆಂಗಳೂರು, (ಆಗಸ್ಟ್ 15): ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯನವರು ಸೈಲೆಂಟ್​​​​​​​ ಆಗಿದ್ದಾರೆ. ಬಹಿರಂವಾಗಿ ಯಾವುದೇ ಹೇಳಿಕೆಗಳನ್ನು ನೀಡದೇ ಸೈಲೆಂಟ್ ಮೂಡ್​​​ಗೆ ಜಾರಿದ್ದಾರೆ. ಇಂದು (ಆಗಸ್ಟ್​ 15) ಮಾಧ್ಯಮದವರು ಸಿದ್ದರಾಮಯ್ಯನವರನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಆದ್ರೆ, ಸಿದ್ದರಾಂಯ್ಯ ಮಾತ್ರ, ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ‌. ನಾನು ಹೆಚ್ಚು ಮಾತಾಡುತ್ತಿಲ್ಲ ಅಷ್ಟೇ . ನಾನು ಮುಖ್ಯಮಂತ್ರಿ ಅಲ್ಲ, ಹಾಗಾಗಿ ಜವಾಬ್ದಾರಿ ಇಲ್ಲ. ನಿನ್ನೆ ಅಧಿವೇಶನದಲ್ಲಿ ಭಾಗಿ ಆಗಿದ್ದೇನೆ. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಎಂದಿದ್ದಾರೆ.

ಮಹಿಳಾ ಕೋಟಾ ಭರ್ತಿ ಆಗಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ್ದು, ಬಿಜೆಪಿಯವರಿಗೆ ಯಾವ ನೈತಿಕತೆ ಇದೆ. ಅವರ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ಕೊಟ್ಟಿಲ್ಲ. ಮಹಿಳೆಯರಿಗೆ ಸ್ಥಾನ ಕೊಡಬೇಕೆಂದು ನಾನು ಹೇಳಿದ್ದೇನೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 15, 2026 02:49 PM
Loading...
Unable to load recommendations.
Follow Us