ಬೇಸಿಗೆಯ ಮೊದಲ ಮಳೆ ಸಿಂಚನ: ಕೆಂಡದಂಥಾ ಬಿಸಿಲಿಗೆ ಬಸವಳಿದ ಬೆಂಗಳೂರಿಗೆ ತಂಪೆರೆದ ಮಳೆರಾಯ

Updated on: Mar 11, 2025 | 6:57 PM

ಬಿರು ಬೇಸಿಗೆ ಬಿಸಿಲಿಗೆ ಬಸವಳಿದ ಬೆಂಗಳೂರಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಹೌದು... ನಗರದ ಕೆಲ ಭಾಗಗಳಲ್ಲಿ ಇಂದು (ಮಾರ್ಚ್​ 11) ಸಣ್ಣ ಪ್ರಮಾಣದ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗರು ಈ ಮಳೆ ಕಂಡು ಫುಲ್ ಖುಷ್ ಆಗಿದ್ದಾರೆ. ಹವಾಮಾನ ಇಲಾಖೆ ಸಹ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿತ್ತು. ಅದರಂತೆ ಇದೀಗ ಮಳೆಯಾಗಿದ್ದು ಜನ ಫುಲ್ ಖುಷ್ ಆಗಿದ್ದಾರೆ.

ಬೆಂಗಳೂರು, (ಮಾರ್ಚ್​ 11): ಬಿರು ಬೇಸಿಗೆ ಬಿಸಿಲಿಗೆ ಬಸವಳಿದ ಬೆಂಗಳೂರಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಹೌದು… ನಗರದ ಕೆಲ ಭಾಗಗಳಲ್ಲಿ ಇಂದು (ಮಾರ್ಚ್​ 11) ಸಣ್ಣ ಪ್ರಮಾಣದ ಮಳೆಯಾಗಿದ್ದು, ಇದು ವರ್ಷದ ಮೊದಲ ಮಳೆಯಾಗಿದೆ. ಮೆಜೆಸ್ಟಿಕ್‌, ಗಾಂಧಿನಗರ, ಶಿವಾಜಿನಗರ, ಎಂಜಿ ರಸ್ತೆ, ಕಬ್ಬನ್‌ ಪಾರ್ಕ್‌, ಇಂದಿರಾನಗರ, ಹಲಸೂರು, ಬನಶಂಕರಿ, ಬಸವನಗುಡಿ, ಚಾಮರಾಜಪೇಟೆ, ಯಶವಂತಪುರ, ರಾಜಾಜಿ ನಗರ, ವಿಜಯ ನಗರ. ಹೊರ ವಲಯಗಳಾದ ಕೆಆರ್‌ ಪುರಂ, ಕನಕಪುರ ರಸ್ತೆ, ಮೈಸೂರು ರಸ್ತೆ ಸುತ್ತಮುತ್ತ ಬಡಾವಣೆಗಳಲ್ಲಿ ತುಸು ಮಳೆಯಾಗಿದೆ. ಬಿರು ಬೇಸಿಗೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರು ಈ ಮಳೆ ಕಂಡು ಫುಲ್ ಖುಷ್ ಆಗಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More