AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru; ಸದನದಲ್ಲಿ ಬುಧವಾರ ನಡೆದ ಅಹಿತಕರ ಘಟನೆಗೆ ಆಡಳಿತ ಪಕ್ಷದ ನಾಯಕನ ಉದ್ಧಟತನವೇ ಕಾರಣ: ಎಚ್ ಡಿ ಕುಮಾರಸ್ವಾಮಿ

Bengaluru; ಸದನದಲ್ಲಿ ಬುಧವಾರ ನಡೆದ ಅಹಿತಕರ ಘಟನೆಗೆ ಆಡಳಿತ ಪಕ್ಷದ ನಾಯಕನ ಉದ್ಧಟತನವೇ ಕಾರಣ: ಎಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 20, 2023 | 1:28 PM

Share

ಅಧಿಕಾರಿಗಳಿಗೆ ಆದೇಶ ಮುಖ್ಯ ಕಾರ್ಯದರ್ಶಿಗಳ ಕಚೇರಿಯಿಂದ ಹೋಗಿಲ್ಲ, ಮುಖ್ಯಮಂತ್ರಿಗಳ ಕಚೇರಿಯಿಂದ ಹೋಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಬೆಂಗಳೂರು: ನಿನ್ನೆ ವಿಧಾನ ಸಭಾ ಅಧಿವೇಶನದಲ್ಲಿ ನಡೆದ ಅಹಿತಕರ ಘಟನೆಗೆ ಆಡಳಿತ ಪಕ್ಷದ ನಾಯಕರ ಉದ್ಧಟತನವೇ ಕಾರಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು. ನಗರದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಶಾಸಕ, ವಿಧಾನ ಸಭಾ ಅಧ್ಯಕ್ಷರ (Speaker) ಕೋಣೆಗೆ ಸಂಧಾನಕ್ಕೆಂದು (truce) ಹೋದಾಗ ಆಡಳಿತ ಪಕ್ಷದ ನಾಯಕ ರಾಷ್ಟ್ರೀಯ ವಿರೋಧ ಪಕ್ಷಗಳ ಸಭೆಗೆ ರಾಜ್ಯದ ಹಿರಿಯ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದು ತಪ್ಪು, ಅದನ್ನು ಸರಿಪಡಿಸಿಕೊಂಡು ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇವೆ ಅಂತ ಹೇಳಿದ್ದರೆ ಸಾಕಿತ್ತು, ವಿಷಾದ ವ್ಯಕ್ತಪಡಿಸುವ ಅಗತ್ಯವೂ ಇರಲಿಲ್ಲ ಎಂದು ಹೇಳಿದರು. ಆಡಳಿತ ಪಕ್ಷದ ನಾಯಕರು ಅದನ್ನು ಮಾಡದೆ ನಮ್ಮಿಂದ ಏನೂ ತಪ್ಪಾಗಿಲ್ಲ ಅಂತ ಉದ್ಧಟತನ ಪ್ರದರ್ಶಿಸಿದರು. ಅಧಿಕಾರಿಗಳಿಗೆ ಆದೇಶ ಮುಖ್ಯ ಕಾರ್ಯದರ್ಶಿಗಳ ಕಚೇರಿಯಿಂದ ಹೋಗಿಲ್ಲ, ಮುಖ್ಯಮಂತ್ರಿಗಳ ಕಚೇರಿಯಿಂದ ಹೋಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ