AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಧೂಪ ಹಾಕುವುದರ ಪ್ರಯೋಜನವೇನು? ಇಲ್ಲಿದೆ ಮಾಹಿತಿ

ಮನೆಯಲ್ಲಿ ಧೂಪ ಹಚ್ಚುವ ಬಗ್ಗೆ ಶಾಸ್ತ್ರದಲ್ಲಿ ಏನು ಹೇಳಲಾಗಿದೆ? ಧೂಪ ಹಚ್ಚುವುದರಿಂದ ಇರುವ ಪ್ರಯೋಜನಗಳೇನು? ಇದರ ಹಿಂದಿರುವ ವೈಜ್ಞಾನಿಕ ಕಾರಣವೇನು? ಮನೆಯ ಯಾವ ಭಾಗದಲ್ಲಿ ಧೂಪ ಹಚ್ಚಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

ಗಣಪತಿ ಶರ್ಮಾ
|

Updated on: Apr 11, 2024 | 7:02 AM

Share

ಪ್ರತಿಯೊಂದು ಮನೆಗಳಲ್ಲಿಯೂ ಕಲಹ, ಸಂಘರ್ಷ ಏನಾದರೂ ಒಂದು ತಾಪತ್ರಯ ದಿನ ಬೆಳಗಾದರೆ ಇದ್ದೇ ಇರುತ್ತದೆ. ಹಾಗಾದರೆ ಇದಕ್ಕೆಲ್ಲ ಪರಿಹಾರವೇನು ಎಂದು ಕೇಳಿದರೆ, ನಮ್ಮ ಶಾಸ್ತ್ರಗಳಲ್ಲಿ ಹೇಳಿರುವ ಪ್ರಕಾರ, ಧೂಪ ಶಾಸ್ತ್ರ ಎಂಬುದು ಒಂದಿದೆ. ಅಂದರೆ ಮನೆಯಲ್ಲಿ ದೂಪ ಹಚ್ಚುವುದು. ಮನೆಯಲ್ಲಿ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಧೂಪ ಹಚ್ಚುವುದರಿಂದ ಅನೇಕ ಸಂಕಷ್ಟಗಳ ನಿವಾರಣೆಯಾಗುತ್ತದೆ. ಇದಕ್ಕೆ ಕೇವಲ ಶಾಸ್ತ್ರ ಮಾತ್ರವಲ್ಲದೆ ವೈಜ್ಞಾನಿಕ ಕಾರಣಗಳೂ ಇವೆ. ಆ ಬಗ್ಗೆ ಬಸವರಾಜ ಗುರೂಜಿ ವಿವರಿಸಿದ್ದಾರೆ.

ಧೂಪವನ್ನು ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ಹಚ್ಚುವುದು ಸೂಕ್ತ. ಇದರಿಂದ ಮನೆಯಲ್ಲಿ ಉತ್ತಮವಾದ ವಾತಾವರಣವಿರುತ್ತದೆ. ವೈಜ್ಞಾನಿಕವಾಗಿ ನೋಡಲು ಹೋದರೆ, ಧೂಪ ಹಚ್ಚುವುದರಿಂದ ಮನೆಯಲ್ಲಿ ಪಸರಿಸುವ ಸುಗಂಧ ದುಷ್ಟ ಶಕ್ತಿಗಳು ಮನೆಯನ್ನು ಪ್ರವೇಶಿಸಿದಂತೆ ತಡೆಯುತ್ತದೆ. ವೈಜ್ಞಾನಿಕವಾಗಿ ನೋಡುವುದಾದರೆ, ವೈರಸ್​​ನಂತ ರೋಗಕಾರಕಗಳು ಮನೆಗಳ ಪ್ರವೇಶಿಸಿದಂತೆ ಧೂಪದ ಹೊಗೆ ತಡೆಯುತ್ತದೆ.

ಆದರೆ ಯಾವುದೂ ಅತಿಯಾಗಬಾರದು. ಮಿತಿಯಲ್ಲಿ ಧೂಪವನ್ನು ಹಚ್ಚುವುದರಿಂದ ಆರೋಗ್ಯಕ್ಕೂ, ಮನಸ್ಸಿನ ನೆಮ್ಮದಿಗೂ ಬಹಳ ಉತ್ತಮ ಎಂದು ಗುರೂಜಿ ಹೇಳುತ್ತಾರೆ.

ಧೂಪ ಜಾಸ್ತಿ ಹಚ್ಚಿದರೆ ಸಣ್ಣ ಪುಟ್ಟ ಮಕ್ಕಳ ಉಸಿರಾಟಕ್ಕೆ ತೊಂದರೆ ಆಗಬಹುದು, ಶ್ವಾಸಕೋಶಕ್ಕೆ ಹಾನಿಯಾಗಬಹುದು. ಹಬ್ಬ ಹರಿದಿನಗಳಲ್ಲಿ ಮಿತವಾಗಿ ಧೂಪ ಹಚ್ಚುವುದು ಶ್ರೇಯಸ್ಕರ. ಮನೆಯ ಈಶಾನ್ಯ ಮೂಲೆಯಲ್ಲಿ ಧೂಪ ಹಚ್ಚುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಪಸರಿಸುತ್ತದೆ. ಆಯುರ್ವೇದದಲ್ಲಿ ಕೂಡ ಧೂಪ ಬಹಚ್ಚುವುದರ ಬಗ್ಗೆ ವಿಶೇಷ ಉಲ್ಲೇಖವಿದೆ ಎಂದು ಅವರು ಹೇಳಿದ್ದಾರೆ.

Follow Us
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ